ಚಿಕ್ಕಮಗಳೂರು
ದೇಶದಲ್ಲಿನ ಸಾಮಾಜಿಕ ಅಸಮಾನತೆ ಹೋಗಲಾಡಿಸಲು ಹಗಲಿರುಳು ಶ್ರಮಿಸಿ ಸಮಸಮಾಜದ ಬಲವರ್ಧನೆಗೆ ದಿಟ್ಟತನದಿಂದ ಹೋರಾಡಿದ ಡಾ. ಬಿ.ಆರ್.ಅಂಬೇಡ್ಕರ್ ಮಹಾನ್ ತಪಸ್ವಿಯಾಗಿದ್ದಾರೆ. ಅವರೊಬ್ಬ ಬಹುಮುಖಿ ವ್ಯಕ್ತಿತ್ವದ ವಿಶ್ವಜ್ಞಾನಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಪಟ್ಟರು.
ನಗರದ ಕುವೆಂಪು ಕಲಾಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಅಂಬೇಡ್ಕರ್ ಅವರ ವೈಜ್ಞಾನಿಕ ಚಿಂತನೆಗಳು ಪ್ರಸ್ತುತ ಮನುಕುಲದ ಉಳಿವಿಗೆ ಹಾಗೂ ದೇಶದ ಪ್ರಗತಿಗೆ ಆಧಾರ ಸ್ಥಂಭಗಳಾಗಿದೆ. ಅವರು ವಿಶ್ವದ ಮಹಾನ್ ಸಂಶೋಧಕರು, ದೇಶದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಜ್ವಲಂತ ಸಮಸ್ಯೆಗಳಿಗೆ ವೈಜ್ಞಾನಿಕ ಸುಧಾರಣೆಗಳನ್ನು ಅವಿಷ್ಕರಿಸುವ ಮೂಲಕ ದೇಶದ ಭದ್ರತೆಗೆ ಸಂವಿಧಾನ ರಚಿಸಿದ್ದಾರೆ. ಅವರ ಮೌಲ್ಯಯುತ ಚಿಂತನೆ ಮತ್ತು ಸಾಧನೆಯನ್ನು ಯುವ ಜನಾಂಗ ಸ್ಮರಿಸಿಕೊಂಡು ಹೊಸತನದ ಸಮಾಜಕ್ಕೆ ಸ್ವತಂತ್ರ ಮನಸ್ಸಿನಿಂದ ತೆರೆದುಕೊಳ್ಳಬೇಕಿದೆ ಎಂದರು.
ಸಮಾನತೆಯ ಸಂದೇಶ ಸಾರಿದ ಡಾ. ಬಿ.ಆರ್ ಅಂಬೇಡ್ಕರ್ ಅವರ ಅಧ್ಯಯನದ ಶಿಸ್ತು, ಕಾರ್ಯಬದ್ಧತೆ ಮತ್ತು ಕರ್ತವ್ಯ ಪ್ರಜ್ಞೆಯ ಮೂಲಕ ಇಡೀ ಜಗತ್ತನ್ನೇ ಬೆಳಗಿದರು. ಸಮಾಜದ ಎಲ್ಲ ವರ್ಗಗಳ ಬದಲಾವಣೆಗೆ ಬೆಳಕು ತೋರಿದರು. ಅವರು ಕೌಟುಂಬಿಕ ಬದುಕಿಗೆ ಆದ್ಯತೆ ನೀಡದೆ ಶೋಷಿತ ಹಾಗೂ ದುರ್ಬಲರ ಪರವಾಗಿ ದಿಟ್ಟತನದಿಂದ ಹೋರಾಡಿದ ಮಹಾನ್ ಚೇತನ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಅವರು ದೇಶಕ್ಕೆ ನೀಡಿದ ಸಂವಿಧಾನದ ಆಶಯಕ್ಕೆ ಚ್ಯುತಿಯಾಗದಂತೆ ಪ್ರತಿಯೊಬ್ಬರು ಅದನ್ನು ಉಳಿಸುವ ಪ್ರಯತ್ನ ಮಾಡಿದಾಗ ಅಂಬೇಡ್ಕರ್ ಜಯಂತಿಗೆ ಪರಿಪೂರ್ಣ ಅರ್ಥ ದೊರೆಯುತ್ತದೆ ಎಂದು ಹೇಳಿದರು.
ಒಂದು ಧರ್ಮವೇ ಅತ್ಯುನ್ನತ, ಅದರ ಸಾರವೇ ಶ್ರೇಷ್ಠ ಎನ್ನುವವರು ಕೋಮುವಾದಿಗಳು. ಇನ್ನೊಂದು ಧರ್ಮವನ್ನು ಸಹ ಪ್ರೀತಿ ವಿಶ್ವಾಸದಿಂದ ಕಂಡಾಗ, ಸಂವಿಧಾನದ ಆಶಯದಂತೆ ಸರ್ವಧರ್ಮ ಭಾವೈಕ್ಯತೆಯ ಸಂದೇಶವನ್ನು ಪಸರಿಸಬಹುದು. ಅಂಬೇಡ್ಕರ್ ಅವರು ತಮ್ಮ ಮನಸ್ಸಿನ ಮೇಲಾದ ಗಾಯಕ್ಕೆ ಪ್ರತಿಯಾಗಿ ಸೆಟೆದು ನಿಂತು, ಶಿಕ್ಷಣದ ಕ್ರಾಂತಿಯನ್ನು ಹುಟ್ಟು ಹಾಕಿದರು. ಹಾಗಾಗಿ ಪ್ರತಿಯೊಬ್ಬರಿಗೂ ಶಿಕ್ಷಣ ದೊರಕದಿದ್ದರೆ, ಅಸ್ಪÊಶ್ಯತೆ ಹಾಗೂ ಅಸಮಾನತೆಯು ಸಮಾಜ ನಿರ್ಮೂಲನೆಯಾಗುವುದಿಲ್ಲ ಎಂದು ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಡಾ. ಮಂಜುಳಾ ಹುಲ್ಲಹಳ್ಳಿ ಉಪನ್ಯಾಸ ನೀಡಿ, ಬಾಬಾ ಸಾಹೇಬ ಡಾ. ಬಿ.ಆರ್.ಅಂಬೇಡ್ಕರ್ ಭಾರತ ಭವ್ಯ ಭಾಗ್ಯದ ನೇತಾರ. ೧೯೧೩ ರಿಂದ ೧೯೧೬ ರವರೆಗೆ ಅಮೇರಿಕಾದಲ್ಲಿ ಅಂಬೇಡ್ಕರ್ ಕಳೆದ ಸಮಯ ಅವರ ಜೀವನದ ಅತ್ಯಂತ ಮಹತ್ವದ ಕ್ಷಣಗಳಾಗಿದ್ದವು. ಆ ಮುಕ್ತ ಪರಿಸರ ಅವರ ಪ್ರತಿಭೆಗೆ ಉತ್ತಮ ಅವಕಾಶ ನೀಡಿತು. ಅರ್ಥಶಾಸ್ತç, ಸಮಾಜಶಾಸ್ತç, ಇತಿಹಾಸ, ತತ್ವಜ್ಞಾನ, ತರ್ಕಶಾಸ್ತç, ರಾಜ್ಯಶಾಸ್ತçಗಳ ಅಧ್ಯಯನ, ೧೯೧೬ರಲ್ಲಿ ಭಾರತದಲ್ಲಿ ರಾಷ್ಟಿçÃಯ ಪ್ರಾಚೀನ ಭಾರತದ ವಾಣಿಜ್ಯ ಉತ್ಪನ್ನ ಪ್ರಬಂಧಕ್ಕೆ ಪಿ.ಎಚ್.ಡಿ, ಭಾರತೀಯ ಜಾತಿಗಳು-ಭಾರತದಲ್ಲಿ ರಾಷ್ಟಿçÃಯ ಹಣಕಾಸಿನ ವಿಕಾಸ ಮುಂತಾದ ಪ್ರಬಂಧಗಳು ಅಂಬೇಡ್ಕರ್ ಅವರಿಗೆ ವಿಶೇಷ ಹೆಸರು ತಂದುಕೊಟ್ಟವು ಎಂದರು.
ಭಾರತದಲ್ಲಿ ಎಲ್ಲಿ ಕಾಲಿಟ್ಟರು ದಲಿತರು, ಹಿಂದುಳಿದವರಿಗೆ ಮತ್ತೆ ಮತ್ತೆ ಅದೇ ಯಾತನೆ, ಶೋಷಣೆ ಅಪಮಾನಗಳ ಪುನಾರಾವರ್ತನೆಯಾಗಿತ್ತು. ವಿದೇಶದ ವಾಸ ಕೊಟ್ಟಿದ್ದ ಗಟ್ಟಿತನದಲ್ಲಿ ಅಂಬೇಡ್ಕರ್ ಅಂದೇ ಪ್ರತಿಜ್ಞೆ ಮಾಡಿದರು. ಅದೂ ತನಗಾಗಿ ಅಲ್ಲ ಬದಲಿಗೆ ತನ್ನವರಿಗಾಗಿ. ಶತ ಶತಮಾನಗಳಿಂದ ಶೋಷಣೆಗೆ ಒಳಗಾಗಿ ದಮನಿಸಲ್ಪಟ್ಟವರಿಗಾಗಿ ಆ ನೋವು ಶೋಷಣೆಗಳಿಗೆ ಒಂದು ತಾತ್ವಿಕ ಅಂತ್ಯ ನೀಡುವುದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟರು ಎಂದು ಸ್ಮರಿಸಿದರು.
ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವ ಮತ್ತು ಜ್ಞಾನವನ್ನು ಇಡೀ ಜಗತ್ತು ಸ್ಮರಿಸಿ ಗೌರವಿಸುತ್ತಿದೆ. ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಸಾಮಾಜಿಕ ಸಮಸ್ಯೆಗಳನ್ನು ವೈಜ್ಞಾನಿಕ ಚಿಂತನೆಗಳ ಮೂಲಕ ಸರಳೀಕರಿಸಿ ಸುಧಾರಣೆ ಮಾಡಿದ ಮೇಧಾವಿ ಎನಿಸಿಕೊಂಡಿದ್ದಾರೆ. ಅವರ ಮಾನವೀಯತೆ, ಸಮಾನತೆ ಮತ್ತು ಭ್ರಾತೃತ್ವದ ಮೌಲ್ಯಗಳು ಇಂದಿಗೂ ಪ್ರಸ್ತುತವಾಗಿದೆ. ಯುವ ಜನಾಂಗ ಅವರ ಚಿಂತನೆಗಳನ್ನು ಅಧ್ಯಯನ ಮಾಡುವ ಮೂಲಕ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕಾಗಿದೆ ಎಂದರು.
ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನ, ಸಾಧನೆ, ವ್ಯಕ್ತಿತ್ವ ಎಲ್ಲರಿಗೂ ದಾರಿದೀಪವಾಗಿದೆ. ಅವರು ದೇಶಕ್ಕೆ ಕೊಡುಗೆಯಾಗಿ ನೀಡಿದ ಸಂವಿಧಾನದಿAದ ವಿಶ್ವದಲ್ಲಿಯೇ ಭಾರತ ಮಾದರಿ ಪ್ರಜಾಪ್ರಭುತ್ವ ರಾಷ್ಟವಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್ಪಿ ವಿಕ್ರಮ್ ಅಮಟೆ, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಪ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್ ಹಾಗೂ ದಲಿತ ಸಂಘದ ಮುಖಂಡರು ಉಪಸ್ಥಿತರಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಪಂ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಗಣ್ಯರಿಂದ ಮಾಲರ್ಪಣೆ ನಡೆಯಿತು. ನಂತರ ನಗರದ ತಾಲೂಕು ಕಚೇರಿಯಿಂದ ಕುವೆಂಪು ಕಲಾಮಂದಿರದವರೆಗೆ ವಿವಿಧ ಕಲಾತಂಡಗಳೊAದಿಗೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು.

ಬಾಕ್ಸ್…..
ಕಾರ್ಯಕ್ರಮದ ವೇಳೆ ಗೊಂದಲ
ಅAಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ದಲಿತ ಮುಖಂಡ ಹಾಗೂ ಬಿಎಸ್ಪಿ ಜಿಲ್ಲಾಧ್ಯಕ್ಷ ಪಿ.ಪರಮೇಶ್ವರ್ ಅವರಿಗೆ ಉಪನ್ಯಾಸ ನೀಡಲು ದಲಿತಪರ ಸಂಘಟನೆಗಳ ಮುಖಂಡರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದರು. ಆದರೆ ಜಿಲ್ಲಾಡಳಿತ ಮುಖ್ಯ ಉಪನ್ಯಾಸಕರನ್ನಾಗಿ ಬೇರೆಯವರಿಗೆ ಅವಕಾಶ ಮಾಡಕೊಟ್ಟಿತ್ತು. ಇದನ್ನು ಖಂಡಿಸಿ ಕಾರ್ಯಕ್ರಮದ ವೇಳೆ ಪ್ರತಿಭಟನೆ ನಡೆಸುವುದಾಗಿ ದಲಿತ ಮುಖಂಡರು ಎಚ್ಚರಿಕೆ ನೀಡಿದ್ದರು. ಅದರಂತೆ ಕಾರ್ಯಕ್ರಮ ಇನ್ನೇನು ಆರಂಭವಾಗಬೇಕು ಎನ್ನುವ ಹಂತದಲ್ಲೇ ಸಭಾಂಗಣಕ್ಕೆ ಆಗಮಿಸಿದ ದಲಿತ ಮುಖಂಡರು ಜಿಲ್ಲಾಡಳಿತದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ಆರಂಭಿಸಿದ್ದರು.
ಏಕಾಏಕಿ ಪ್ರತಿಭಟನೆ ಆರಂಭಗೊAಡಿದ್ದರಿAದಾಗಿ ಒಂದು ಕ್ಷಣ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಶಾಸಕ ಎಚ್.ಡಿ.ತಮ್ಮಯ್ಯ ಹಾಗೂ ಎಸ್ಪಿ ವಿಕ್ರಮ ಅಮಟೆ ಅವರು ಪ್ರತಿಭಟನಕಾರರನ್ನು ಸಮಾಧಾನಗೊಳಿಸಿ ಪರಮೇಶ್ವರ್ ಅವರನ್ನು ವೇದಿಕೆಗೆ ಆಹ್ವಾನಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದರು.