ಅಭಿವೃದ್ಧಿ ಕಾರ್ಯಗಳೇ ನನ್ನ ಗೆಲುವಿಗೆ ಶ್ರೀರಕ್ಷೆ

blank

ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜನ ತೋರುತ್ತಿರುವ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿ ಎಂದು ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಹೇಳಿದರು.

ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಿ.ಮಲ್ಲಿಗೆರೆ ಗ್ರಾಪಂ ವ್ಯಾಪ್ತಿಯ ಆನುಕುಪ್ಪೆ ಗ್ರಾಮದ ಆನುಕುಪ್ಪಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ದುದ್ದ ಹೋಬಳಿಯ ಗ್ರಾಮಗಳಲ್ಲಿ ಬೈಕ್ ರ‌್ಯಾಲಿ ಮೂಲಕ ಮತಯಾಚಿಸಿ ಮಾತನಾಡಿದರು.
ಕ್ಷೇತ್ರದ ಜನರ ಆಶೀರ್ವಾದದಿಂದ ಮೂರು ಬಾರಿ ಶಾಸಕ, ಸಚಿವ ಹಾಗೂ ಸಂಸದನ್ನಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ನನ್ನ ಗೆಲುವಿಗೆ ಶ್ರೀರಕ್ಷೆ ಎಂದರು.

ಶ್ರೀರಂಗಪಟ್ಟಣದ ನಿಮಿಷಾಂಬ ದೇವಸ್ಥಾನ ಬಳಿ ಹರಿಯುವ ಕಾವೇರಿ ನದಿಯಿಂದ 69 ಕಿಮೀ ಪೈಪ್‌ಲೈನ್ ಅಳವಡಿಸಿ ಏತನೀರಾವರಿ ಮೂಲಕ ದುದ್ದ ಭಾಗದ ಎಲ್ಲ ಗ್ರಾಮಗಳ ಕೆರೆಕಟ್ಟೆಗಳನ್ನು ತುಂಬಿಸುವ ಯೋಜನೆ ಮುಕ್ತಾಯ ಹಂತದಲ್ಲಿದೆ. ತಾಲೂಕಿನ ಬಳಘಟ್ಟ ಏತ ನೀರಾವರಿಗೆ ಚಾಲನೆ ದೊರೆತಿದ್ದು, ಈಗಾಗಲೇ ಅದರ ಪ್ರಯೋಜನವನ್ನು ರೈತರು ಪಡೆದುಕೊಳ್ಳುತ್ತಿದ್ದಾರೆ ಎಂದರು.

ನುಡಿದಂತೆ ನಡೆದು ಉತ್ತಮ ಸರ್ಕಾರ ನೀಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2023ಕ್ಕೆ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದೇ ರೀತಿ ಅವರ ನೇತೃತ್ವದ ಸರ್ಕಾರದಲ್ಲಿ ನಾನು ಸಚಿವನಾಗುತ್ತೇನೆ. ಆದ್ದರಿಂದ ಕ್ಷೇತ್ರದ ಮತದಾರರು ಆಶೀರ್ವಾದ ಮಾಡಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಕೋರಿದರು.

ಮತ ಪ್ರಚಾರ ವೇಳೆ ನೂರಾರು ಯುವಕರು ಬೈಕ್ ರ‌್ಯಾಲಿ ನಡೆಸಿ ಜೈಕಾರ ಕೂಗಿದರು. ಮಹಿಳೆಯರು ಆರತಿ ಬೆಳಗಿ ಶುಭ ಹಾರೈಸಿದರು. ದುದ್ದ ಹೋಬಳಿಯ ಜೆಡಿಎಸ್ ಮುಖಂಡರು ಹಾಗೂ ಅಭಿಮಾನಿಗಳು ಇದ್ದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…