ಆತಂಕದ ನಡುವೆ ವಾಹನ ಸವಾರರ ಸಂಚಾರ

blank

ಸಿದ್ದಾಪುರ: ಸಿದ್ದಾಪುರ-ಶಿರಸಿ ರಾಜ್ಯ ಹೆದ್ದಾರಿಯ ಕಾನಸೂರು ಹೈಸ್ಕೂಲ್ ಸಮೀಪ ರಸ್ತೆ ಕುಸಿಯುತ್ತಿದ್ದು, ವಾಹನ ಸವಾರರು ಆತಂಕದಿಂದಲೇ ಸಂಚಾರ ಮಾಡುವ ಸ್ಥಿತಿ ಉಂಟಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಲವು ರಸ್ತೆಗಳಲ್ಲಿ ಗುಡ್ಡ ಕುಸಿತದಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದರೆ, ಇದು ಗ್ರಾಮೀಣ ರಸ್ತೆಯಲ್ಲ. ರಾಜ್ಯ ಹೆದ್ದಾರಿ ಆಗಿರುವುದರಿಂದ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತವೆ. ಕಳೆದ ವಾರ ಇದೇ ಹೆದ್ದಾರಿಯ ತ್ಯಾಗಲಿ ಸಮೀಪ ಗುಡ್ಡ ಕುಸಿದ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.
ಯಲ್ಲಾಪುರ-ಅಂಕೋಲಾ ಹಾಗೂ ಕುಮಟಾ-ಶಿರಸಿ ರಸ್ತೆಗಳು ಬಂದ್ ಆಗಿರುವ ಕಾರಣ ವಾಹನಗಳು ಶಿರಸಿ-ಸಿದ್ದಾಪುರ ಮಾರ್ಗವಾಗಿ ಕುಮಟಾ-ಹೊನ್ನಾವರಗಳಿಗೆ ಹೋಗುತ್ತಿರುವುದ ರಿಂದ ನಿತ್ಯ 500ಕ್ಕೂ ಹೆಚ್ಚು ವಾಹನಗಳು ಓಡಾಡುತ್ತವೆ. ಇದರಿಂದ ರಸ್ತೆ ಮತ್ತಷ್ಟು ಕುಸಿಯುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಯವರು ವಾಹನಗಳ ವೇಗಕ್ಕೆ ತಡೆಯೊಡ್ಡುವ ಸಲುವಾಗಿ ಅಪಾಯದ ಸೂಚನೆಯ ನಾಮಫಲಕ ಅಳವಡಿಸಿದ್ದಾರೆ.


ಧರೆ ಕುಸಿಯುವ ಕುರಿತು ಈ ಹಿಂದೆಯೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಆದರೆ, ಈ ಬಗ್ಗೆ ಯಾರೂ ಕ್ರಮ ಕೈಗೊಳ್ಳಲಿಲ್ಲ. ಈಗ ಕುಸಿಯುತ್ತಿರುವ ಧರೆ ರಸ್ತೆಗೆ ಕೇವಲ ಎರಡು ಅಡಿ ಬಾಕಿ ಇದೆ. ಮಳೆ ಹೆಚ್ಚಾದರೆ ಮತ್ತಷ್ಟು ಧರೆ ಕುಸಿದು ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.
| ಸುಭಾಸ್ ನಾಯ್ಕ ಕಾನಸೂರು
ಗ್ರಾಪಂ ಮಾಜಿ ಅಧ್ಯಕ್ಷ


ವಾಹನಗಳ ಓಡಾಟ ಹೆಚ್ಚಾಗಿರುವುದರಿಂದ ಕಾನಸೂರು ಸಮೀಪ ರಸ್ತೆ ಕುಸಿಯುತ್ತಿದೆ. ಮಳೆ ಕಡಿಮೆ ಆದ ತಕ್ಷಣ ದುರಸ್ತಿ ಮಾಡಲಾಗುವುದು. ಈ ಕುರಿತು ಸಂಬಂಧ ಪಟ್ಟ ಮೇಲಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
| ಎಂ.ಎಚ್. ಮುದಕಣ್ಣನವರ್
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೋಪಯೋಗಿ ಇಲಾಖೆ

Share This Article

ಖಾಲಿ ಹೊಟ್ಟೆಯಲ್ಲಿ ಒಂದು ಚಿಟಿಕೆ ಶುಂಠಿ ತಿಂದು, ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Ginger

Ginger: ಅಡುಗೆಯ ರುಚಿ ಹೆಚ್ಚಿಸಲು ನಾವು ವಿವಿಧ ರೀತಿಯ ಮಸಾಲೆ ಪದಾರ್ಥಗಳನ್ನು ಬಳಸುತ್ತೇವೆ, ಅವುಗಳಲ್ಲಿ ಶುಂಠಿಯೂ…

ಸಣ್ಣ ಇರುವವರು ದಪ್ಪವಾಗಲು ಇಲ್ಲಿದೆ ಸುಲಭ ಮಾರ್ಗ: ಇಂತಹ ನ್ಯಾಚುರಲ್​​ ಆಹಾರ ಸೇವಿಸಿದ್ರೆ ಸಾಕು| Weight Gain

Weight Gain: ಸಾಮಾನ್ಯವಾಗಿ ದಪ್ಪಗಿರುವ ವ್ಯಕ್ತಿಗಳು ಸಣ್ಣದಾಗಲು ಕಷ್ಟ ಎಂದು ಬಹುತೇಕರು ಪರಿಗಣಿಸುತ್ತಾರೆ. ಆದರೆ, ಸಣಕಲು…

ನಾಗರಹಾವು ಕಚ್ಚಿದ್ರೆ ತಕ್ಷಣ ಈ ರೀತಿ ಮಾಡಿ… ಇಲ್ಲವಾದಲ್ಲಿ ಮೂರೇ ನಿಮಿಷಕ್ಕೆ ಪ್ರಾಣ ಹೋಗುತ್ತೆ! Cobra Snake

Cobra Snake : ಹಾವುಗಳನ್ನು ಕಂಡರೆ ಹೆದರಿ ಓಡುವವರೇ ಹೆಚ್ಚು. ತುಂಬಾ ಅಪಾಯಕಾರಿ ಜೀವಿಗಳಲ್ಲಿ ಹಾವುಗಳು…