ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡಿ

Dr. Archana Kulkarni, Tobacco, Ind., Miscarriage, Stillbirth,

ಇಂಡಿ: ಉತ್ತಮವಾದ ಆಹಾರ ಸೇವನೆಯಿಂದ ಮಾತ್ರ ಆರೋಗ್ಯವಂತರಾಗಲು ಸಾಧ್ಯ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಅರ್ಚನಾ ಕುಲಕರ್ಣಿ ಹೇಳಿದರು.

ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಂಬಾಕು, ಗುಟಕಾ ಹಾಗೂ ಸಿಗರೇಟು-ಬೀಡಿ ಸೇವನೆಯಿಂದ ಜೀವಕ್ಕೆ ಬಹಳಷ್ಟು ಕುತ್ತು ಬರಲಿದೆ. ಶ್ವಾಸಕೋಶದ ಕ್ಯಾನ್ಸರ್, ಗಂಟಲು ಕ್ಯಾನ್ಸರ್, ಬಾಯಿ- ರಕ್ತನಾಳಕ್ಕೆ ಹಾನಿ, ಕುತ್ತಿಗೆ ಮತ್ತು ಶಿರದ ಕ್ಯಾನ್ಸರ್, ಗಂಟಲು ಧ್ವನಿ ಪೆಟ್ಟಿಗೆ, ಮೆದುಳು, ಅನ್ನನಾಳ, ಪಿತ್ತಕೋಶ, ಮೂತ್ರಪಿಂಡ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ. ಮಹಿಳೆಯರಲ್ಲಿ ಮೇಲಿಂದ ಮೇಲೆ ಗರ್ಭಪಾತ ಮತ್ತು ನಿರ್ಜೀವ ಜನನ ಆಗುತ್ತವೆ. ವೈದ್ಯರಲ್ಲಿ ಆಪ್ತ ಸಮಾಲೋಚನೆ ಮೂಲಕ ತಂಬಾಕು ಸೇವನೆಯಿಂದ ದೂರವಾಗಬಹುದು ಎಂದು ಹೇಳಿದರು.

ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಸುನಂದಾ ಅಂಬಲಗಿ, ಪ್ರವೀಣ ಸೋನಾರ, ನಜೀರ ಮುಲ್ಲಾ, ಎಲ್.ಎಸ್.ಸೋಮ ನಾಯಕ, ಎಂ.ಎಚ್. ಬಗಲಿ, ಬಿ.ಎಸ್. ಪಾಟೀಲ, ವಿಶ್ವನಾಥ ತೆನಿಹಳ್ಳಿ, ಕಿರಣಕುಮಾರ ನಾಯಕ, ಭೀಮರಾಯ ನಾವಿ, ದೀಪಾ ಹೂಗಾರ ಇತರರಿದ್ದರು.

Share This Article

ನರ ದೌರ್ಬಲ್ಯಕ್ಕೆ ನೆಲ್ಲಿಕಾಯಿಯೇ ರಾಮಬಾಣ! ಇದರ ಅನೇಕ ಪ್ರಯೋಜನಗಳ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುತ್ತೆ | Gooseberry

Gooseberry : ಪ್ರಕೃತಿಯಲ್ಲಿ ಹಲವು ರೀತಿಯ ಔಷಧಿಗಳಿವೆ. ಅವು ನಮ್ಮ ಕಣ್ಣಿಗೆ ಗೋಚರಿಸುತ್ತಿದ್ದರೂ ಅವುಗಳಲ್ಲಿರುವ ವಿಶೇಷ…

ಕೊರಿಯನ್ನರು, ಚೀನಿಯರು, ಜಪಾನಿಯರು ರಾತ್ರಿ ಹೊತ್ತು ಸ್ನಾನ ಮಾಡೋದೇಕೆ?ಅಚ್ಚರಿಯ ಮಾಹಿತಿ ಇಲ್ಲಿದೆ..! Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…

ಬೇಸಿಗೆಯಲ್ಲಿ ಮಾವಿನ ಹಣ್ಣು ತಿನ್ನಿ! ಅನಾರೋಗ್ಯ ದೂರ ಮಾಡಿ…Mango

ಬೆಂಗಳೂರು: ( Mango ) ಬೇಸಿಗೆಯಲ್ಲಿ  ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.…