ಚಿಕ್ಕಮಗಳೂರು: ಭಾರತೀಯರ ಸಿಂಧೂರಕ್ಕೆ ಕೈ ಹಾಕಿದ್ದಕ್ಕೆ ಇಂದು ತಕ್ಕ ಪ್ರತಿಕಾರ ತೀರಿಸಿಕೊಂಡಿz್ದೆÃವೆ. ಪಹಲ್ಗಾಮ್ ದಾಳಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೊಟ್ಟ ಮಾತು ತಪ್ಪುವುದಿಲ್ಲ ಎಂಬುವ ನಂಬಿಕೆ ಇತ್ತು. ಜೊತೆಗೆ ಭಾರತೀಯ ಸೇನೆಯ ಮೇಲೆಯೂ ಅಪಾರ ನಂಬಿಕೆ ಇತ್ತು. ಹೀಗಾಗಿಯೇ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನಕ್ಕೆ ತಕ್ಕ ತಿರುಗೇಟು ನೀಡಿz್ದÉÃವೆ. ಈ ಮೂಲಕ ನಮಗೆ ಇಂದು ಎರಡನೇ ದೀಪಾವಳಿ ಹಬ್ಬವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಮಾತೆ ಹಾಗೂ ಸಹೋದರಿಯರ ಸಿಂಧೂರ ಅಳಿಸಲು ಬಂದವರನ್ನು ಅಳಿಸಿz್ದÉÃವೆ. ಸಿಂಧೂರ ಎನ್ನುವ ಹೆಸರಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ಸೇನೆ ಬೆಲೆ ತಂದುಕೊಟ್ಟಿದ್ದಾರೆ ಎಂದು ಹೇಳಿದರು.
೧೯೭೧ರಲ್ಲಿ ಯುದ್ಧವನ್ನು ಗೆದ್ದಿದ್ದೆವು. ಆದರೆ ಸಂದಾನದಲ್ಲಿ ಸೋತು ಹೋಗಿದ್ದೆವು. ಶತ್ರುಗಳನ್ನು ಸಂಪೂರ್ಣ ನಿರ್ನಾಮ ಮಾಡಬೇಕು, ಇದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆಯೊಂದಿಗೆ ದೇಶದ ಜನರಿದ್ದಾರೆ. ಒಂದು ಸಲ ಪಾಕಿಸ್ತಾನವನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ಹೇಳಿದರು.
ಇನ್ನು ರಾಜ್ಯ ಕಾಂಗ್ರೆಸ್ ಟ್ವೀಟ್ ಗೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ಸಿ.ಟಿ.ರವಿ ಅವರು, ನಾಗರಿಕರ ನಡುವೆ ಶಾಂತಿ ಇರಬೇಕು. ಶತ್ರುಗಳನ್ನು ಮಟ್ಟ ಹಾಕುವುದು ಕೂಡ ಶಾಂತಿಯೇ. ಇದು ಶಾಶ್ವತ ಶಾಂತಿಗೆ ಕಾರಣವಾಗುತ್ತದೆ. ರಾಜ್ಯ ಕಾಂಗ್ರೆಸ್ಸಿಗೆ ನಾನೂ ಕೂಡ ಟ್ವೀಟ್ ಮಾಡಿದ್ದೆ. ಬಳಿಕ ರಾಜ್ಯ ಕಾಂಗ್ರೆಸ್ ತನ್ನ ಟ್ವೀಟ್ ಡಿಲೀಟ್ ಮಾಡಿರುವುದನ್ನು ನೋಡಿz್ದÉÃನೆ. ಇದು ಬದಲಾಗಿರುವ ಕಾಂಗ್ರೆಸ್ಸಿನ ಮನಸ್ಥಿತಿ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂದು ಹೇಳಿಕೊಳ್ಳುವ ಯೋಗ್ಯತೆಯನ್ನು ಕಾಂಗ್ರೆಸ್ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್ ಮೇಲೆ ಜನರಿಗೆ ಅಪನಂಬಿಕೆ ಹಾಗೂ ಜಿಗುಪ್ಸೆ ಮೂಡುತ್ತಿದೆ ಎಂದು ಹೇಳಿದರು.