ಈಜಾಡಲು ಹೋದ ಬಾಲಕ ಸಾವು

ಮಧುಗಿರಿ: ಮಂಗಳವಾರ ಶಾಲೆ ಮುಗಿಸಿ ಈಜಾಡಲು ಹೋದ ಬಾಲಕ ಮುಳುಗಿ ಮೃತಪಟ್ಟಿದ್ದಾನೆ. ತಾಲೂಕಿನ ಕೊಡಿಗೇನಹಳ್ಳಿ ಸವೋರ್ದಯ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತಿದ್ದ ರಂಗನಹಳ್ಳಿಯ ಹರ್ಷವರ್ಧನ್​ (14) ಡ್ರಾಯಿಂಗ್​ ಕ್ಲಾಸ್​ ಮುಗಿಸಿ ಹುಡುಗರ ಜತೆ ಕೊಡಿಗೇನಹಳ್ಳಿಯ ಜಯಮಂಗಲಿ ನದಿಯಲ್ಲಿ ಈಜಾಡಲು ಹೋಗಿದ್ದು, ಈಜು ಬಾರದೆ ಮೃತಪಟ್ಟಿದ್ದಾನೆ. ಮೃತನು ಕೊಡಿಗೇನಹಳ್ಳಿಯ ದೇವರಾಜು ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಮಧ್ಯಾಹ್ನ ಊಟ ಮಾಡಿ ಶಾಲೆಗೆ ತೆರಳಿದ್ದು, ಶಾಲೆಯಲ್ಲಿ 2 ಗಂಟೆಗೆ ಕ್ಲಾಸ್​ ಮುಗಿಸಿ ಈಜಾಡಲು ತೆರಳಿ ಈಜು ಬಾರದೆ ನೀರಲ್ಲಿ ಮುಳುಗಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಕುರಿಗಾಹಿಗಳು ಬ್ಯಾಗಿನಲ್ಲಿದ್ದ ಆಧಾರ್​ ಕಾರ್ಡ್​ ಕಂಡು ಪಾಲಕರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಶವವನ್ನು ಮಧುಗಿರಿ ಶವಗಾರಕ್ಕೆ ರವಾನಿಸಿದ್ದು, ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…