ಕಂಪ್ಲಿಯಲ್ಲಿ ವಕ್ಫ್ ಜಾಗೃತಿ ಸಮಾವೇಶ ನಾಳೆ

blank

ಕಂಪ್ಲಿ: ಪಟ್ಟಣದ ಶಾರದಾ ಶಾಲೆ ಆವರಣದಲ್ಲಿ ಜ.4ರಂದು ಮಧ್ಯಾಹ್ನ 3 ಗಂಟೆಗೆ ವಕ್ಫ್ ಹಟಾವೋ ದೇಶ ಬಚಾವೋ ಜನಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಸಂಚಾಲಕ ಎಂ.ಭರತ್ ಹೇಳಿದರು.
ಪಟ್ಟಣದ ಅತಿಥಿಗೃಹ ಆವರಣದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಗುರುವಾರ ಮಾತನಾಡಿದರು. ಎಮ್ಮಿಗನೂರಿನ ವಾಮದೇವ ಶಿವಾಚಾರ್ಯರು, ಕಂಪ್ಲಿ ಕಲ್ಮಠದ ಪ್ರಭುಮಹಾಸ್ವಾಮಿಗಳು, ಹಂಪಿ ಮಾತಂಗ ಪರ್ವತದ ಪೂರ್ಣಾನಂದ ಭಾರತಿಶ್ರೀಗಳ ಸಾನ್ನಿಧ್ಯದಲ್ಲಿ ಉದ್ಭವ ಮಹಾಗಣಪತಿ ದೇವಸ್ಥಾನದಿಂದ ಪಾದಯಾತ್ರೆ ಆರಂಭಗೊಳ್ಳಲಿದೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಚಂದ್ರಪ್ಪ, ಬಿ.ಪಿ.ಹರೀಶ್, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ, ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ಧೇಶ್ವರ್, ಮಾಜಿ ಸಂಸದರಾದ ಬಿ.ವಿ.ನಾಯಕ್, ಪ್ರತಾಪ್‌ಸಿಂಹ, ಎಂ.ಭರತ್, ರವಿ ಬಿರಾದಾರ್, ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಪಾಲ್ಗೊಳ್ಳಲಿದ್ದಾರೆ ಎಂದರು.
ಪಾದಯಾತ್ರೆ ಪ್ರಮುಖ ರಸ್ತೆ ಮೂಲಕ ಸಾಗಿ ಶಾರದಾ ಶಾಲೆ ಆವರಣದಲ್ಲಿ ಸಮಾರೋಪಗೊಂಡ ಬಳಿಕ ಬಹಿರಂಗ ಸಭೆ ನಡೆಯಲಿದೆ. ವಕ್ಫ್ ಕಾಯ್ದೆಯಿಂದ ಸಮಸ್ಯೆಗೊಳಗಾದ ರೈತರಿಂದ ದಾಖಲೆಗಳನ್ನು ಸಂಗ್ರಹಿಸಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಂಬಿಕಾ ಪಾಲ್‌ಗೆ ವರದಿ ಸಲ್ಲಿಸಲಾಗುವುದು. ವಕ್ಫ್‌ನಿಂದ ಸಮಸ್ಯೆಗೀಡಾದ ರೈತರು ಹಾಗೂ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಿದರು. ಸಮಿತಿ ಸದಸ್ಯರಾದ ವಾಲ್ಮೀಕಿ ಈರಣ್ಣ, ಎಂ.ಮಂಜುನಾಥ, ಪಿ.ಶಂಭುಲಿಂಗ, ಹರೀಶ್ ಚಿತ್ರಗಾರ್, ಸಂತೋಷ್ ದಮ್ಮಾಳೆ, ಕೆ.ರೇಣುಕರಾಜ, ಕೆ.ಚಂದ್ರಶೇಖರ್, ಜಿ.ಮನೋಜ್, ವಿಜಯ್ ಇತರರಿದ್ದರು.

Share This Article

ಈ 3 ರಾಶಿಯ ಪುರುಷರು ಪ್ರೀತಿಗೋಸ್ಕರ ತಮ್ಮ ಪ್ರಾಣ ಕೊಡಲು ಸಿದ್ಧರಾಗಿರುತ್ತಾರೆ! ನಿಮ್ಮದು ಇದೇ ರಾಶಿನಾ? Zodiac Signs

Zodiac Signs : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ರುದ್ರಾಕ್ಷಿ ಧರಿಸುವ ಮುನ್ನ ಈ 9 ವಿಷಯಗಳು ನಿಮ್ಮ ಗಮನದಲ್ಲಿರಲಿ! ಇಂತಹ ತಪ್ಪುಗಳು ಆಗದಿರಲಿ… | Rudraksha

Astrology Tips: ರುದ್ರಾಕ್ಷಿ ಎಂಬ ಪದ ಕೇಳಿದೊಡನೆ ನಮ್ಮಲ್ಲಿ ಭಕ್ತಿ ಭವಾನೆ ಮೂಡುತ್ತದೆ. ರುದ್ರಾಕ್ಷಿಗಳಿಂದ (Rudraksha)…

ಬೇಸಿಗೆಯಲ್ಲಿ ಈ ಜ್ಯೂಸ್​ ಕುಡಿದರೆ, ಸುಡುವ ಸೂರ್ಯ ಕೂಡ ನಿಮ್ಮನ್ನು ಏನೂ ಮಾಡಲು ಸಾಧ್ಯವಾಗುವುದಿಲ್ಲ! summer

summer:  ಸಾಮಾನ್ಯವಾಗಿ ಮಾರ್ಚ್ ಅಂತ್ಯದಿಂದ ಏಪ್ರಿಲ್, ಮೇ ಮತ್ತು ಜೂನ್ ವರೆಗೆ ಸೂರ್ಯನು ಪ್ರಕಾಶಮಾನವಾಗಿ ಬೆಳಗುತ್ತಾನೆ. …