ಬಾಗಲಕೋಟೆ: ‘ಕರೊನಾ ಲಕ್ಷಣಗಳಿವೆ ಕ್ವಾರಂಟೈನ್ ಆಗಿ ಮನೆಯಲ್ಲಿಯೇ ಇರಿ. ಹೊರಗೆ ಬರಬೇಡಿ’ ಎಂದು ಕರೊನಾ ವಾರಿಯರ್ ನರ್ಸ್ ಹೇಳಿದ್ದನ್ನೇ ಕಾರಣವಾಗಿಟ್ಟುಕೊಂಡು, ನಮ್ಮ ಮರ್ಯಾದೆ ಹಾಳು ಮಾಡಿದೆ ಎಂದು ರೊಚ್ಚಿಗೆದ್ದು ಗುಂಪುಕಟ್ಟಿಕೊಂಡು ಆಕೆಯ ಮೇಲೆ ಹಲ್ಲೆ ಮಾಡಿದ ಘಟನೆ ಬಾದಾಮಿ ತಾಲೂಕಿನ ಹೊಸಕೋಟೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.
ಹೊಸಕೋಟೆ ಗ್ರಾಮದ ಇಂದ್ರವ್ವ ಎಂಬುವವರಿಗೆ ಕೋವಿಡ್ ಲಕ್ಷಣ ಕಂಡು ಬಂದ ಹಿನ್ನೆಲೆ ಅವರಿಗೆ ಕ್ವಾರಂಟೈನ್ ಇರಲು ಸೂಚಿಸಲಾಗಿತ್ತು. ಬಳಿಕ ತಪಾಸಣೆಯ ವೇಳೆ ನೆಗೆಟಿವ್ ಬಂದಿತ್ತು. ಇದರಿಂದ ರೊಚ್ಚಿಗೆದ್ದ ಕುಟುಂಬದವರು ಊರಿನಲ್ಲಿ ನಮ್ಮ ಮರ್ಯಾದೆ ಹಾಳು ಮಾಡಿದೆ ಎಂದು ಆರೋಪಿಸಿ ಕರೊನಾ ವಾರಿಯರ್ ಕೆರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸರಕಾರಿ ಮಹಿಳಾ ಕಿರಿಯ ಆರೋಗ್ಯ ಸಹಾಯಕಿ ರಾಜೇಶ್ವರಿ ಮ್ಯಾಗಿನಮನಿ (47) ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.
ಜೊತೆಗೆ ರಾಜೇಶ್ವರಿ ಕುಟುಂಬದವರು ಹಲ್ಲೆ ಮಾಡುವುದನ್ನು ವಿಡಿಯೋ ಮಾಡಿದರು ಎಂದು ಕೋಪಗೊಂಡು ಅವರ ಮೇಲೂ ಕೋಲಿನಿಂದ ಹಲ್ಲೆಗೆ ಮುಂದಾದರು ಎಂದು ಆರೋಪಿಸಲಾಗಿದೆ.
ಘಟನೆಯಿಂದ ನರ್ಸ್ ರಾಜೇಶ್ವರಿಯವರು ಅಸ್ವಸ್ಥಗೊಂಡಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದ್ರವ್ವ ಅರಹುಣಶಿ, ಪರಶುರಾಮ ನಾಯ್ಕರ್, ದೇವಕೆವ್ವ ನಾಯ್ಕರ್, ಗೋಪಾಲ ನಾಯ್ಕರ್ ಎಂಬುವವರ ವಿರುದ್ಧ ಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ.
ಕರೊನಾ ವಾರಿಯರ್ ನರ್ಸ್ ಮೇಲೆ ಹಲ್ಲೆ

ಅನಾನಸ್ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips
Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…
ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer
Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…
ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್ನ ಶತ್ರುಗಳು! Cholesterol
Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…