ಕಲ್ಯಾಣ ಮಂಟಪದಲ್ಲಿ ಮುಯ್ಯಿ ದುಡ್ಡು ಕದ್ದಿದ್ದ ಕಳ್ಳನ ಬಂಧನ

blank

ಚಾಮರಾಜನಗರ: ನಗರದ ಕಲ್ಯಾಣ ಮಂಟಪದಲ್ಲಿ ವಧುವಿನ ಕೊಠಡಿಯಲ್ಲಿ ಇಟ್ಟಿದ್ದ ಮುಯ್ಯಿ ಹಣವನ್ನು ಕದ್ದು ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ಕ್ಷಿಪ್ರವಾಗಿ ಬಂಧಿಸಿದ್ದಾರೆ.

ನಗರದ ವಿರಕ್ತ ಮಠದ ಅನುಭವ ಮಂಟಪದಲ್ಲಿ ಭಾನುವಾರ ನಡೆಯುತ್ತಿದ್ದ ಕೊತ್ತಲವಾಡಿಯ ಗುರುಪ್ರಸಾದ್ ಮತ್ತು ಬಂಡಿಗೌಡನಹಳ್ಳಿ ಮಹೇಶ್ವರಿ ವಿವಾಹದಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಗಾಳೀಪುರದ ಯಾಸಿನ್ (18) ಪೊಲೀಸರು ಬಂಧಿಸಿದ್ದಾರೆ. ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕವರ್ ಸುಟ್ಟು ಹಾಕಿದ್ದ: ಮದುವೆಯಲ್ಲಿ ವಧುವಿಗೆ ಸಂಬಂಧಿಕರು, ಹಿತೈಷಿಗಳು ಮುಯ್ಯಿ ಹಣವನ್ನು ನೀಡಿದ್ದರು. ಇದನ್ನು ವಧುವಿನ ಕೊಠಡಿಯಲ್ಲಿ ಇಡಲಾಗಿತ್ತು. ಇಲ್ಲಿಗೆ ಬಂದ ಯಾಸಿನ್ ಹಣವನ್ನು ಕದ್ದು ಪರಾರಿಯಾಗಿದ್ದ. ಈ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಸಿಸಿಟಿವಿ ಕ್ಯಾಮರಾಗಳಲ್ಲಿ ಪರಿಶೀಲಿಸಿದರು. ರಸ್ತೆಗಳಲ್ಲಿ ಪೊಲೀಸ್ ಇಲಾಖೆ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳೂ ಕಳ್ಳನ ಪತ್ತೆಗೆ ನೆರವಾಗಿವೆ. ದೃಶ್ಯಾವಳಿಯಲ್ಲಿ ಯಾಸಿನ್‌ನನ್ನು ಪೊಲೀಸರು ಗುರುತಿಸಿದ್ದಾರೆ. ತಕ್ಷಣ ಈತನ ಮನೆ ಬಳಿಗೆ ಹೋಗಿದ್ದಾರೆ. ಯಾಸಿನ್ ಮುಯ್ಯಿ ಹಣ ತೆಗೆದುಕೊಂಡು ಕವರ್ ಗಳನ್ನು ಸುಟ್ಟು ಹಾಕಿರುವುದು ಗೊತ್ತಾಗಿದೆ. ಯಾಸಿನ್ ನನ್ನು ಬಂಧಿಸಲಾಗಿದೆ. ಪಟ್ಟಣ ಠಾಣೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…