ಕಳೆಗುಂದಿದ ಜಾತ್ರಾ ಸಡಗರ

blank

ಮುಂಡರಗಿ: ಸ್ಥಳೀಯ ಕೋಟೆಗುಡ್ಡದ ಶ್ರೀ ಲಕ್ಷ್ಮೀ ಕನಕ ನರಸಿಂಹ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ಶನಿವಾರ ಸಾವಿರಾರು ಭಕ್ತರ ಜಯಘೊಷದ ಮಧ್ಯೆ ಮಹಾರಥೋತ್ಸವ ಸಂಭ್ರಮದಿಂದ ಜರುಗಿತು.

ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವಿವಿಧ ಧಾರ್ವಿುಕ ಪೂಜಾ ಕೈಂಕರ್ಯಗಳು ನೆರವೇರಿಸಲಾಯಿತು. ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಬೆಳಗ್ಗೆ ಡಾ.ಬಿ.ಆರ್.ಅಂಬೇಡ್ಕರ್ ನಗರದಿಂದ ದಲಿತ ಸಮುದಾಯದ ನೂರಾರು ಭಕ್ತರು ಗರುಡಾರತಿ ಹೊತ್ತು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತೆರಳಿ ಗುರುಡಾರತಿ ಸೇವೆ ಸಲ್ಲಿಸಿದರು.

ಈ ಬಾರಿ ಜಾತ್ರೆಗಿಲ್ಲ ಕಳೆ: ಕರೊನಾ ವೈರಸ್ ತಡೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ತಾಲೂಕು ಆಡಳಿತವು ಶುಕ್ರವಾರ ರಾತ್ರಿ ಜಾತ್ರೆ ಪ್ರಯುಕ್ತ ಹಾಕಲಾಗಿದ್ದ ಅಂಗಡಿ, ಮುಂಗಟ್ಟುಗಳನ್ನು ತೆರವುಗೊಳಿಸಿದ ಪರಿಣಾಮ ಈ ಬಾರಿ ಜಾತ್ರೆಯ ಕಳೆ ಮರೆಯಾಗಿತ್ತು. ಜನಸಂಖ್ಯೆಯಲ್ಲಿ ಇಳಿಮುಖ ಕಂಡುಬಂತು.



Share This Article

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…