ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ : ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ವಿಶ್ವಾಸ

blank

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಶ್ರವಣಬೆಳಗೊಳ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂ. ಎ.ಗೋಪಾಲಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ನುಗ್ಗೇಹಳ್ಳಿ ಹೋಬಳಿಯ ಅಕ್ಕನಹಳ್ಳಿ ವೃತ್ತದ ಗಣೇಶ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದರು.


ತಾಲೂಕಿನ ಕಬ್ಬಳಿ ದಿಡಗ ಭಾಗದ ಕೆರೆಗಳಿಗೆ ಏತ ನೀರಾವರಿ ಯೋಜನೆ, ತೆಂಗಿನ ಉಪ ಉತ್ಪನ್ನಗಳ ಕಾರ್ಖಾನೆಗಳ ಸ್ಥಾಪನೆ, ಅನ್ನಭಾಗ್ಯ ಯೋಜನೆಯಿಂದ 10 ಕೆಜಿ ಅಕ್ಕಿ ವಿತರಣೆ, ಗ್ರಾಮೀಣ ವಿದ್ಯಾವಂತ ನಿರುದ್ಯೋಗಿಗಳಿಗೆ ಕೌಶಲಾಭಿವೃದ್ಧಿ ತರಬೇತಿ, ಕ್ಷೇತ್ರದ ಹೆಚ್ಚಿನ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲು ನನಗೆ ಆಶೀರ್ವದಿಸಿ ಎಂದು ಮನವಿ ಮಾಡಿದರು.


ಅಕ್ಕನಹಳ್ಳಿ ಪಂಚಾಯಿತಿಯ ಸೊಸಲಗೆರೆ, ಶೆಟ್ಟಿಹಳ್ಳಿ, ಸಮುದ್ರಳ್ಳಿ, ಬಾಣನಕೆರೆ, ಹೆಬ್ಬಳಲು, ಗ್ರಾಮಗಳಲ್ಲಿ ಬೆಂಬಲಿಗರೊಂದಿಗೆ ಮತಯಾಚಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಡಿ.ಕಿಶೋರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಂ.ಶಂಕರ್, ಮುಖಂಡರಾದ ಮಂಜಣ್ಣ, ಯುವರಾಜ್, ಗ್ರಾಮ ಪಂಚಾಯಿತಿ ಸದಸ್ಯ ರಾಜಕುಮಾರ್, ಮಧು, ಪ್ರವೀಣ್, ಕಿರಣ್, ಶರತ್, ಶೇಖರ್, ಶಂಕರ್ ಲಿಂಗೇಗೌಡ, ಗಣೇಶ್, ಬಸವರಾಜ್, ಚಂದು, ಚೇತು, ರಕ್ಷಿ, ಕಾರ್ಯಕರ್ತರು ಹಾಜರಿದ್ದರು.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…