ಕಾಯ್ದೆಗಳ ಸ್ಪಷ್ಟ ಅರಿವು ಮೂಡಿಸುವುದು ಅಗತ್ಯ

blank

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಕಮಿಷನರೇಟ್, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಕೆಎಲ್‌ಇ ಜೀರಗೆ ಸಭಾ ಭವನದಲ್ಲಿ ಬುಧವಾರ ಮಕ್ಕಳ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಮಾತನಾಡಿ, ಮಕ್ಕಳ ರಕ್ಷಣೆ, ಪೋಕ್ಸೊ ಹಾಗೂ ಇತ್ತೀಚೆಗೆ ಮಕ್ಕಳ ಕಳ್ಳರ ಕುರಿತು ಪ್ರಸಾರವಾಗುತ್ತಿರುವ ಸುದ್ದಿಗಳ ಕುರಿತು ಅರಿವು ಅಗತ್ಯ. ಇನ್ನಿತರ ಅಪರಾಧಗಳಿಂದ ಮಕ್ಕಳ ರಕ್ಷಣೆ ಮತ್ತು ಪಾಲಕರ, ಶಿಕ್ಷಕರ ಹಾಗೂ ಪೊಲೀಸ್ ಇಲಾಖೆ ಜವಾಬ್ದಾರಿ ಕುರಿತು ತಿಳಿಹೇಳಿದರು. ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಡಿಸಿಪಿ ಸ್ನೇಹ ಪಿ.ವಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಶಿವಾನಂದ ಮಾಸ್ತಿಹೊಳಿ, ಡಿಡಿಪಿಐ ಬಸವರಾಜ ನಲತವಾಡ, ಬಿಇಒ ವೈ.ಜೆ.ಭಜಂತ್ರಿ, ಕೆಎಸ್‌ಆರ್‌ಟಿಸಿ ಡಿಸಿ ಪಿ.ವೈ.ನಾಯ್ಕ, ಆರ್‌ಟಿಒ ಶಿವಾನಂದ ಮಗದುಮ್ಮ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಜೆ.ಟಿ.ಲೋಕೇಶ ಇತರರಿದ್ದರು.

Share This Article

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…