ಕೃತಿಗಳ ಲೋಕಾರ್ಪಣೆ, ಗುರು-ಶಿಷ್ಯರ ಸಂಬಂಧ ಸಂಸ್ಕೃತಿಯ ಪ್ರತೀಕ ,ಇತಿಹಾಸಕಾರ ಡಾ. ಬಿ. ರಾಜಶೇಖರಪ್ಪ ಅಭಿಪ್ರಾಯ

blank

ಕೃತಿಗಳ ಲೋಕಾರ್ಪಣೆ
ಗುರು-ಶಿಷ್ಯರ ಸಂಬಂಧ ಸಂಸ್ಕೃತಿಯ ಪ್ರತೀಕ ಇತಿಹಾಸಕಾರ ಡಾ. ಬಿ. ರಾಜಶೇಖರಪ್ಪ ಅಭಿಪ್ರಾಯ

blank

ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಗುರು ಶಿಷ್ಯರ ಸಂಬಂಧವು ಭಾರತೀಯ ಸಂಸ್ಕೃತಿಯ ಶ್ರೀಮಂತಿಕೆಯ ಪ್ರತೀಕವಾಗಿದೆ. ಅದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಇಬ್ಬರ ಮೇಲೂ ಇರುತ್ತದೆ ಎಂದು ಚಿತ್ರದುರ್ಗದ ಖ್ಯಾತ ಸಂಶೋಧಕ ಹಾಗೂ ಇತಿಹಾಸಕಾರ ಡಾ. ಬಿ. ರಾಜಶೇಖರಪ್ಪ ಅವರು ಇಂದು ಅಭಿಪ್ರಾಯ ಪಟ್ಟರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ಎ.ಎಂ. ಜಯಶ್ರೀ ಅವರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರ ಮಾತನಾಡಿದರು.

ಎ.ಎಂ. ಜಯಶ್ರೀ ಅವರು ಜಿನದತ್ತ ದೇಸಾಯಿಯವರ ಜೀವನ ಚರಿತ್ರೆಯನ್ನು ಸುಂದರವಾಗಿ ಕಟ್ಟಿಕೊಟ್ಟು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆಯನ್ನು ನೀಡಿದ್ದಾರೆ. ಅವರ ಜೀವನದ ಕಷ್ಟಗಳನ್ನು ಏರಿಳಿತಗಳನ್ನು ಮನೋಜ್ಞವಾಗಿ ಹಣ್ಣೆಲೆಯ ಹಸಿರು ನೆನವು ಕೃತಿ ಕಟ್ಟಿ ಕೊಡುತ್ತದೆ.

ಅವರ ಕೊಳಲಾಗುವ ಆಸೆ ಕವನ ಸಂಕಲವು ಅನೇಕ ಸುಂದರವಾದ ಕವಿತೆಗಳನ್ನು ಹೊಂದಿದ್ದು ಇದರಲ್ಲಿ ಆಧ್ಯಾತ್ಮಿಕ ಚಿಂತನೆ ಮೂಡಿಬಂದಿದೆ ಎಂದು ವಿವರಿಸಿದರು.

ಲೇಖಕಿ ಎಂ ಎಂ ಜಯಶ್ರೀ, ಹಿರಿಯ ಸಾಹಿತಿ ಬಸವರಾಜ ಜಗಜಂಪಿ ಇತರರಿದ್ದರು.

Share This Article

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…

ಬೇಸಿಗೆಯಲ್ಲಿ ಪಿತ್ತಕೋಶ ಸಮಸ್ಯೆ ಹೆಚ್ಚಳ

| ಪಂಕಜ ಕೆ.ಎಂ., ಬೆಂಗಳೂರು ಬಿಸಿಲ ಝುಳ ಹೆಚ್ಚಾಗಿದ್ದರೂ ದೇಹದಲ್ಲಿ ನೀರಿನಂಶ ಕಾಪಾಡಿಕೊಳ್ಳುವಲ್ಲಿ ವಿಫಲರಾಗುತ್ತಿರುವ ಜನರು…