ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್‌,ಆಧಾರ್ ಜೋಡಣೆ ಸಲ್ಲ

blank

ಚಿತ್ರದುರ್ಗ: ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಆಳವಡಿಕೆಯೊಂದಿಗೆ, ಆಧಾರ್ ನೋಂದಾಯಿಸುವುದನ್ನು ವಿರೋಧಿಸಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದಿಂದ ಡಿಸಿ ಕಚೇರಿವರೆಗೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ದರು.
ಪ್ರತಿ ಪಂಪ್‌ಸೆಟ್‌ಗೆ ಮೀಟರ್ ಅಳವಡಿಸಿ,ಆಧಾರ್ ನೋಂದಣಿ ಮಾಡಿಸುವಂತೆ ರಾಜ್ಯ ಸರ್ಕಾರ ಕ್ಕೆ ನಿರ್ದೇಶನ ನೀಡಿರುವ ಕ ರ್ನಾಟಕ ವಿದ್ಯುತ್‌ಚ್ಛಕ್ತಿ ಬೆಲೆ ನಿಯಂತ್ರಣ ಆಯೋಗ(ಕೆಇಆರ್‌ಸಿ)ದ ನಡೆಯನ್ನು ಖಂಡಿಸಿದ ಪ್ರತಿಭಟನಾಕಾರರು,ಈ ಕೆಲಸವನ್ನು ಕೂಡಲೇ ಕೈಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕೆಇಆರ್‌ಸಿ ಗ್ರಾಹಕರ ಹಿತ ರಕ್ಷಣೆ ಮಾಡ ಬೇಕಾಗಿದೆ ಹೊರತು ನೀತಿ,ನಿಯಮಗಳನ್ನು ಸರ್ಕಾರಕ್ಕೆ ನಿರ್ದೇಶಿಸುವುದು ಸರಿಯಲ್ಲ. ರೈತ ರು ದೇಶದ ಆಹಾರ ಭದ್ರತೆ ಕಾಪಾಡುತ್ತಿದ್ದಾರೆ. ಈಚಿನ ದಿನಗಳಲ್ಲಿ ಮಲೆನಾಡು ಹಾಗೂ ಬಯಲುಸೀಮೆಯಲ್ಲೂ ಅಡಕೆ ಬೆಳೆ ಕೂಡ ಮುಖ್ಯವಾಗುತ್ತಿದೆ.

ಅದಕ್ಕೆ ಅನುಗುಣವಾಗಿ ರಾಜ್ಯಸರ್ಕಾರ ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತವಾಗಿ ವಿದ್ಯುತ್ ನೀಡುತ್ತಿದ್ದು, ಆಯೋಗದ ನಿರ್ದೇಶನ ರೈತರ ಕತ್ತು ಹಿಚುಕಿದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯರೈತ ಸಂಘದ ಪ್ರಧಾನ ಕಾರ‌್ಯದರ್ಶಿ ಟಿ. ನುಲೇನೂರು ಶಂಕರಪ್ಪ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್‌ಬಾಬು,ಧನಂಜಯ,ಎಂ.ಬಿ.ತಿಪ್ಪೇಸ್ವಾಮಿ,ರವಿ ಕೋಗುಂಡೆ, ಡಿ.ಮಲ್ಲಿಕಾರ್ಜನ್,ಕೆ.ಎಂ.ಕಾಂತರಾಜು,ಶಿವ ಕುಮಾರ್,ಚಿಕ್ಕಪ್ಪನಹಳ್ಳಿರುದ್ರಸ್ವಾಮಿ,ಹೊರಕೇರಪ್ಪ,ಕೆ.ಪಿ.ಭೂತಯ್ಯ, ಚೇತನ್,ರಹಿಂಸಾಬ್,ಗೌಸ್‌ಪೀರ್,ಸುಧಾ,ಶಿವಲಿಂಗಮ್ಮ,ಮಹಾಂತೇಶ್,ಎಸ್.ತಿಪ್ಪೇಸ್ವಾಮಿ,ರೇವಣ್ಣ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…