ಕಲಬುರಗಿ: ಚಿಂಚೋಳಿ ತಾಲೂಕಿನ ಹೊಡೆಬೀರನಳ್ಳಿಯಲ್ಲಿ ೨೦೧೪ ನ.೨೮ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಅಪರಾಧಿ ಶಂಕರ್ಗೆ ೧೦ ವರ್ಷ, ದ್ವಿತೀಯ ಅಪರಾಧಿ ರೇವಣಸಿದ್ದಪ್ಪನಿಗೆ ೭.೬ ವರ್ಷ ಜೈಲು ಶಿಕ್ಷೆ ನೀಡಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಕರಣ್ ಗುಜ್ಜರ್ ತೀರ್ಪು ನೀಡಿದ್ದಾರೆ. ಹೊಲದಲ್ಲಿ ಪಾಲು ಸರಿಯಾಗಿ ನೀಡಿಲ್ಲ ಎಂದು ಹೊಡೆಬೀರನಳ್ಳಿಯ ಶಿವಣ್ಣನನ್ನು ಮನೆಯ ಎದುರೇ ಬಡಿಗೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ಅಲ್ಲದೆ ಶಿವಣ್ಣನ ಪತ್ನಿಯನ್ನು ಎಳೆದಾಡಿ ಮಾನಭಂಗಪಡಿಸಿದ್ದು, ಮಕ್ಕಳ ಮೇಲೆ ಹಲ್ಲೆ ಮಾಡಲಾಗಿತ್ತು. ಈ ಕುರಿತು ಸುಲೇಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಅಂದಿನ ಸಿಪಿಐ ಶೀಲವಂತ ಹೊಸಮನಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಇಬ್ಬರು ಪ್ರಮುಖ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದು, ಮೃತನ ಪತ್ನಿಗೆ ೩೦ ಸಾವಿರ ಪರಿಹಾರ ನೀಡಲು ಆದೇಶಿಸಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕ ಪ್ರಾಣೇಶ ಭರತನೂರ ವಾದಿಸಿದ್ದರು. ಎಚ್.ಸಿ. ಮನೋಹರ ರಡ್ಡಿ ಸಾಕ್ಷಿಗಳನ್ನು ಹಾಜರುಪಡಿಸಿದ್ದರು.
ಕೊಲೆಗಾರನಿಗೆ 10 ವರ್ಷ ಜೈಲು ಶಿಕ್ಷೆ

ನಿದ್ರೆಯಿಂದ ಕ್ಯಾನ್ಸರ್ವರೆಗೆ… ದ್ರಾಕ್ಷಿ ತಿನ್ನುವುದರಿಂದ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ! Grapes
Grapes : ಪ್ರತಿದಿನ ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ದ್ರಾಕ್ಷಿಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ.…
ಬಿದಿರಿನ ಉಪ್ಪಿನ ಬಗ್ಗೆ ನಿಮಗೆ ತಿಳಿದಿದೆಯೇ? ಇದರ ಬೆಲೆ ಮತ್ತು ಪ್ರಯೋಜನಗಳನ್ನು ಕೇಳಿದ್ರೆ ಅಚ್ಚರಿ ಖಚಿತ! Bamboo Salt
Bamboo Salt : ಆರು ಮಸಾಲೆಗಳಲ್ಲಿ ಉಪ್ಪು ಕೂಡ ಒಂದು. ಭಾರತೀಯ ಪಾಕಪದ್ಧತಿಯಲ್ಲಿ ಉಪ್ಪು ಬಹಳ…
ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla
Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್ಬೆರಿ ಎಂದು ಕರೆಯಲಾಗುತ್ತದೆ. ಇದು…