ಗಣಪತಿ ಕೆರೆ ಸರ್ವೆ ನಾಳೆ

blank

ಸಾಗರ: ಇತಿಹಾಸ ಪ್ರಸಿದ್ಧ ಗಣಪತಿ ಕೆರೆ ಸರ್ವೆ ಬುಧವಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ರಾಜಕೀಯ ಪಕ್ಷಗಳ ಪ್ರಮುಖರು, ಸಾಹಿತಿಗಳಾದ ಡಾ. ನಾ.ಡಿಸೋಜ, ವಿಲಿಯಂ, ಡಾ. ಜಿ.ಎಸ್.ಭಟ್ ಸೇರಿ ಪರಿಸರ ಮತ್ತು ಅಭಿವೃದ್ಧಿ ಪರ ಇರುವವರ ಮನೆಗೆ ಭೇಟಿ ನೀಡಿ ಸರ್ವೆ ಸಂದರ್ಭ ಸೂಕ್ತ ಸಲಹೆ ನೀಡುವಂತೆ ಮನವಿ ಮಾಡಿದ್ದೇನೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.

ಮಂಗಳವಾರ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದ ಅವರು, ಕೆರೆ ಒತ್ತುವರಿಯಾಗಿದೆ ಎಂದು ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಸರ್ವೆ ನಡೆಸುವಂತೆ ಇತ್ತೀಚೆಗೆ ಮನವಿ ಸಲ್ಲಿಸಲಾಗಿತ್ತು. ಹಾಗಾಗಿ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಹಿರಿಯ ಅಧಿಕಾರಿ ನೇತೃತ್ವದಲ್ಲಿ ಸರ್ವೆ ನಡೆಯಲಿದೆ ಎಂದರು.

ಗಣಪತಿ ಕೆರೆ ಒತ್ತುವರಿಗೆ ಸಂಬಂಧಿಸಿ ಯಾರನ್ನೂ ಉಳಿಸುವ ಪ್ರಶ್ನೆಯೇ ಇಲ್ಲ. ಸರ್ವೆ ಸಂದರ್ಭ ನಿವೃತ್ತ ಸರ್ಕಾರಿ ಮತ್ತು ಖಾಸಗಿ ಸರ್ವೆಯರ್​ಗಳೂ ಪಾಲ್ಗೊಳ್ಳಬಹುದು. ಕೆರೆ ಮೇಲ್ಭಾಗದ 3 ಎಕರೆ ಜಾಗ ಕಾಗೋಡು ತಿಮ್ಮಪ್ಪ ಅವರು ಸಾರ್ವಜನಿಕ ಉದ್ದೇಶಕ್ಕಾಗಿ ಖಾಸಗಿಯವರಿಂದ ಭೂಸ್ವಾಧೀನ ಮಾಡಿಕೊಂಡಿದ್ದಾಗಿದೆ. ಕೆಲವರು ಇದನ್ನೂ ಕೆರೆ ಜಾಗ ಎಂದು ಬಿಂಬಿಸುತ್ತಿದ್ದಾರೆ. ಈ ಸರ್ವೆ ಮೂಲಕ ಒತ್ತುವರಿ ನಿಖರತೆ ಸಿಗುವ ಆಶಾಭಾವನೆ ಇದೆ ಎಂದು ತಿಳಿಸಿದರು.

ಲೇಖಕ ವಿಲಿಯಂ ಮಾತನಾಡಿ, ಬಹಳ ವರ್ಷಗಳ ನಂತರ ಕೆರೆ ಸರ್ವೆ ಅಧಿಕೃತವಾಗಿ ನಡೆಯುತ್ತಿರುವುದು ಸಂತೋಷ ತಂದಿದೆ. ಜತೆಗೆ ನಗರ ವ್ಯಾಪ್ತಿಯ ಕೆಲ ಪ್ರಮುಖ ರಸ್ತೆಗಳಲ್ಲಿ ಫುಟ್​ಪಾತ್ ನಿರ್ವಿುಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಡಾ. ಜಿ.ಎಸ್.ಭಟ್, ಗಣಪತಿ ದೇವಸ್ಥಾನ ಹಿತರಕ್ಷಣಾ ಸಮಿತಿ ಸಂಚಾಲಕ ಐ.ವಿ.ಹೆಗಡೆ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಗರ ಅಧ್ಯಕ್ಷ ಗಣೇಶಪ್ರಸಾದ್, ತಾಪಂ ಸದಸ್ಯ ದೇವೇಂದ್ರಪ್ಪ, ಪ್ರಮುಖರಾದ ವಿನಾಯಕ ರಾವ್, ಬಿ.ಟಿ.ರವೀಂದ್ರ ಇದ್ದರು.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…