ಕೊಪ್ಪಳ: ನಗರದ ಗವಿಮಠದ ಆವರಣದಲ್ಲಿ ಪತಿಯೇ ಪತ್ನಿಗೆ ಚಾಕು ಇರಿದು ಭಾನುವಾರ ಕೊಲೆ ಮಾಡಿದ್ದಾನೆ.
ತುಮಕೂರು ಜಿಲ್ಲೆ ತುರವೇಕೇರೆ ಬಳಿಯ ಭುವನಹಳ್ಳಿಯ ಗೀತಾ (25) ಕೊಲೆಯಾದವರು. ಈಕೆಯ ಪತಿ ರಾಜೇಶ ಕೊಲೆ ಮಾಡಿದಾತ. ಮಠದ ಆವರಣದಲ್ಲಿ ಜಾತ್ರೆ ಸಂಭ್ರಮ ಮನೆ ಮಾಡಿದ್ದು ಸಾಕಷ್ಟು ಜನ ಸೇರಿದ್ದರು. ಮದ್ಯ ವ್ಯಸನಿಯಾಗಿರುವ ರಾಜೇಶ ತನ್ನ ಪತ್ನಿ ಶೀಲ ಶಂಕಿಸಿ ಆಗಾಗ ಜಗಳ ತೆಗೆಯುತ್ತಿದ್ದ. ಅನೇಕ ಬಾರಿ ರಾಜಿ ಸಂಧಾನ ಮಾಡಲಾಗಿತ್ತು. ಇತ್ತೀಚೆಗೆ ದಂಪತಿ ಹೊಂದಿಕೊಂಡಿದ್ದರು. ಗವಿಮಠ ಜಾತ್ರೆಯಲ್ಲಿ ಪಾತ್ರೆ ಮಾರಾಟ ಅಂಗಡಿ ಹಾಕಿಕೊಳ್ಳಲು ಆಗಮಿಸಿದ್ದರು.ಶನಿವಾರ ಮತ್ತೊಮ್ಮೆ ಇಬ್ಬರ ನಡುವೆ ಜಗಳವಾಗಿದೆ. ಭಾನುವಾರ ಬೆಳಗ್ಗೆ ತಾನು ಊರಿಗೆ ಹೋಗುವುದಾಗಿ ಹೇಳಿದ ಗೀತಾ ರಾಜೇಶನನ್ನು ಬಿಟ್ಟು ಹೊರಟಿದ್ದರು. ಇದರಿಂದ ಕುಪಿತನಾದ ರಾಜೇಶ, ಗೀತಾ ಕತ್ತಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ತಕ್ಷಣ ನೆರೆದಿದ್ದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆಗೆ ಗೀತಾ ಕೊನೆಯುಸಿರೆಳೆದಿದ್ದಾರೆ.
ಗವಿಮಠದ ಆವರಣದಲ್ಲಿ ಗಂಡನಿಂದಲೇ ಹೆಂಡತಿ ಕೊಲೆ
You Might Also Like
ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count
Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…
ಕ್ಯಾರೆಟ್ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್ ವಿಧಾನ | Recipe
ಕ್ಯಾರೆಟ್ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…
ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಮೊಟ್ಟೆಗಳು ಪ್ರೋಟೀನ್ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…