ಗೆದ್ದೆತ್ತಿನ ಬಾಲ ಹಿಡಿಯುವುದೇ ಜೆಡಿಎಸ್ ಸಿದ್ಧಾಂತ

blank

ನಾಗಮಂಗಲ: ಕಾಂಗ್ರೆಸ್ ಗೆದ್ದರೆ ಕಾಂಗ್ರೆಸ್ ಜತೆ, ಬಿಜೆಪಿ ಗೆದ್ದರೆ ಬಿಜೆಪಿ ಜತೆ ಹೋಗುವ ಜೆಡಿಎಸ್‌ಗೆ ಯಾವುದೇ ತತ್ವ ಸಿದ್ಧಾಂತವಿಲ್ಲ. ಗೆದ್ದೆತ್ತಿನ ಬಾಲ ಹಿಡಿಯುವುದಷ್ಟೇ ಜೆಡಿಎಸ್‌ನ ತತ್ವ ಸಿದ್ಧಾಂತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಪಟ್ಟಣದ ಟಿಬಿ ಬಡಾವಣೆಯ ಬಡಗೂಡಮ್ಮದೇವಿ ದೇವಸ್ಥಾನದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಪರ ಮತಯಾಚಿಸಿದ ಮಾತನಾಡಿದರು.

ಬಿಜೆಪಿ ಜತೆ ಮೈತ್ರಿ ಮಾಡಿಸಿ ಚಲುವರಾಯಸ್ವಾಮಿ ಒಂದು ಬಾರಿ ಎಚ್ಡಿಕೆಯನ್ನು ಸಿಎಂ ಮಾಡಿ ತಪ್ಪು ಮಾಡಿಬಿಟ್ಟಿದ್ದಾನೆ. ಕಳೆದ ಬಾರಿ ಬಿಜೆಪಿಯನ್ನು ದೂರವಿಡಲು ನಾವು ಅವರಿಗೆ ಬೆಂಬಲ ಕೊಟ್ಟು ಸಿಎಂ ಮಾಡಿದ್ದೆವು. ಆದರೆ ಕುಮಾರಸ್ವಾಮಿ ಬೇಜವಾಬ್ದಾರಿಯಿಂದ ಸರ್ಕಾರವನ್ನು ಕಳೆದುಕೊಂಡು ನನ್ನ ಮೇಲೆ ಗೂಬೆ ಕೂರಿಸಿದರು ಎಂದು ದೂರಿದರು.

ಜೆಡಿಎಸ್‌ನವರು ಯಾವುದೇ ಪಕ್ಷಕ್ಕೂ ಬಹುಮತ ಬಾರದಂತೆ ದಿನನಿತ್ಯ ಪೂಜೆ, ಹೋಮ ಮಾಡಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕುಮಾರಸ್ವಾಮಿಯೇ ಕಾರಣ. ಸಿದ್ದರಾಮಯ್ಯ ಅವರಿಂದ ಸರ್ಕಾರ ಹೊರಟು ಹೋಯ್ತು ಅಂತಾರೆ. ಇವರಿಗೆ ಅಮೆರಿಕ, ತಾಜ್ ವೆಸ್ಟೆಂಡ್‌ನಲ್ಲಿ ಕುಳಿತುಕೊಳ್ಳಿ ಅಂತ ನಾನು ಹೇಳಿದ್ನಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಈ ಬಾರಿ 20 ರಿಂದ 25 ಸೀಟು ತೆಗೆದುಕೊಳ್ಳುತ್ತಾರೆ ಅಷ್ಟೇ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ ಎಂದು ಮನವಿ ಮಾಡಿದರು.

ಪ್ರಸ್ತುತ ಬಿಜೆಪಿಯವರು ಬಡವರ ರಕ್ತ ಕುಡಿಯುತ್ತಿದ್ದು, ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. 4 ವರ್ಷದಲ್ಲಿ ಬಿಜೆಪಿ ಸರ್ಕಾರ ಒಂದೇ ಒಂದು ಮನೆ ಸಹ ಹೊಸದಾಗಿ ಮಂಜೂರು ಮಾಡಲಿಲ್ಲ. ನಾನು ಸಿಎಂ ಆಗಿದ್ದಾಗ 5 ವರ್ಷದಲ್ಲಿ 15 ಲಕ್ಷ ಮನೆಗಳನ್ನು ಕಟ್ಟಿಸಿಕೊಟ್ಟಿದ್ದೆ. ಆದರೆ ನಾವು ಕಟ್ಟಿಸಿದ ಮನೆಗಳಿಗೆ ಬಾಕಿ ಬಿಲ್ ಕೂಡ ಕೊಟ್ಟಿಲ್ಲ. ಇತಿಹಾಸದಲ್ಲಿ ಇಷ್ಟೊಂದು ಭ್ರಷ್ಟ ಸರ್ಕಾರ ಯಾವತ್ತು ಬಂದಿರಲಿಲ್ಲ. ಜನರಿಗೆ ಬಿಜೆಪಿ ಮೇಲೆ ಬಹಳ ಬೇಸರವಿದ್ದು, ಈ ಬಾರಿ 100ಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬಂದೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಎಂಎಲ್ಸಿ ಬಿ.ರಾಮಕೃಷ್ಣ, ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಬೆಟ್ಟೇಗೌಡ, ನಿರ್ದೇಶಕ ಮೂಡ್ಯಚಂದ್ರು, ಮನ್ಮುಲ್ ಮಾಜಿ ಅಧ್ಯಕ್ಷರಾದ ತಮ್ಮಯ್ಯ, ಜವರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾಶ್ರೀಕಾಂತ್, ಮುಖಂಡರಾದ ಪ್ರಸನ್ನ, ಎಚ್.ಟಿ.ಕೃಷ್ಣೇಗೌಡ, ದಿವಾಕರ್ ಮತ್ತಿತರಿದ್ದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…