ಗೊಲ್ಲಪಲ್ಲಿ ಬಳಿ ಬಸ್‌ಗಳಿಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ: ಹಟ್ಟಿ ಠಾಣೆಯಲ್ಲಿ‌ಪ್ರಕರಣ ದಾಖಲು

blank

ರಾಯಚೂರು: ಕಿಡಿಗೇಡಿಗಳ ಗುಂಪೊಂದು ಚಲಿಸುತ್ತಿದ್ದ ಬಸ್‌ಗಳು ಹಾಗೂ ಖಾಸಗಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೊಲ್ಲಪಲ್ಲಿ ಬಳಿ ಸೋಮವಾರ ತಡರಾತ್ರಿ ನಡೆದಿದೆ.

ಚಿತ್ತಾಪೂರದಿಂದ ದಾವಣಗೆರೆ, ಬೀದರ್‌ನಿಂದ ಬಳ್ಳಾರಿ ಹಾಗೂ ಔರಾದ್‌ದಿಂದ ಬಳ್ಳಾರಿ ಕಡೆಗೆ ಹೊರಟಿದ್ದ ಬಸ್‌ಗಳು ಹಾಗೂ ಖಾಸಗಿ ವಾಹನಗಳಿಗೆ ಹಾಣಿಯಾಗಿದ್ದು, ಗೊಲ್ಲಪಲ್ಲಿ ಬಳಿ ರಾತ್ರಿ 1.30ರ ಸುಮಾರಿಗೆ ಕಿಡಿಗೇಡಿಗಳ ಗುಂಪು ದುರುದ್ದೇಶ ಕಾರಣದಿಂದ ಕಲ್ಲು ತೂರಿ ವಾಹನಗಳನ್ನು ನಿಲ್ಲಿಸಲು ಯತ್ನಿಸಿದ್ದಾರೆ.

ಬಸ್‌ಗಳಿಗೆ ಕಲ್ಲು ಬಿದ್ದೊಡನೆ ಬಸ್ ಚಾಲಕರು ವಾಹನಗಳನ್ನು ನಿಲ್ಲಿಸದೇ ಗುರುಗುಂಟಾ ಗ್ರಾಮಕ್ಕೆ ತಂದಿದ್ದಾರೆ. ಬಸ್‌ಗಳ ಗಾಜುಗಳು ಒಡೆದಿದ್ದು, ಬಸ್‌ಗಳಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.
ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗೊಲ್ಲಪಲ್ಲಿ ಬಳಿ ವಾಹನಗಳಿಗೆ ಕಿಡಿಗೇಡಿಗಳು ಕುಡಿದ ಮತ್ತಿನಲ್ಲಿ ಕಲ್ಲು ತೂರಾಟ ನಡೆಸಿರುವುದಾಗಿ ಮಾಹಿತಿ ಬಂದಿದ್ದು, ಆ ಸಮಯದಲ್ಲಿ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುವುದು. |ಎಂ.ಪುಟ್ಟಮಾದಯ್ಯ, ಎಸ್ಪಿ ರಾಯಚೂರು

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…