ಚಿಕ್ಕದೇವಮ್ಮ ಬೆಟ್ಟ ಅಭಿವೃದ್ಧಿಗೆ ಸಿಎಂ ಒತ್ತು

blank

ಸರಗೂರು: ತಾಲೂಕಿನ ಚಿಕ್ಕದೇವಮ್ಮನ ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ನಾಯಕ ಸಮಾಜದ ಮಾಜಿ ಅಧ್ಯಕ್ಷ ಶಂಭುಲಿಂಗನಾಯಕ ತಿಳಿಸಿದರು.

blank

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ತಾಲೂಕಿನ ಕಾಂಗ್ರೆಸ್ ಮುಖಂಡರು ಬೆಂಗಳೂರಿನಲ್ಲಿ ಇತ್ತೀಚೆಗೆ ಭೇಟಿ ಮಾಡಿ ಅಭಿನಂದಿಸಿದರು.

ಅನಿಲ್ ಚಿಕ್ಕಮಾದು ಎರಡನೇ ಬಾರಿಗೆ ಶಾಸಕರಾಗಿ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಆಯ್ಕೆಯಾಗಬೇಕೆಂದು ಚಿಕ್ಕದೇವಮ್ಮತಾಯಿ ಬೆಟ್ಟದಲ್ಲಿ ಹರಕೆ ಹೊರಲಾಗಿತ್ತು. ಇದೀಗ ಎಲ್ಲವೂ ಅಂದುಕೊಂಡಂತೆ ಆಗಿದೆ. ತಾಲೂಕಿನ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಅನುದಾನ ನೀಡಬೇಕು. ಜತೆಗೆ ಚಿಕ್ಕದೇವಮ್ಮನ ಬೆಟ್ಟದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವಂತೆ ಸಿಎಂ ಬಳಿ ಮನವಿ ಮಾಡಲಾಗಿದೆ ಎಂದು ಶಂಭುಲಿಂಗನಾಯಕ ತಿಳಿಸಿದರು.

ಮನವಿಗೆ ಸ್ಪಂದಿಸಿಸಿರುವ ಮುಖ್ಯಮಂತ್ರಿಗಳು, ತಾವೇ ಚಿಕ್ಕದೇವಮ್ಮನ ಬೆಟ್ಟಕ್ಕೆ ಬರುವುದಾಗಿ ತಿಳಿಸಿದ್ದಾರೆ. ಬೆಟ್ಟದ ಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಜಿಪಂ ಸದಸ್ಯ ಚಿಕ್ಕವೀರ ನಾಯಕ, ಎಪಿಎಂಸಿ ಮಾಜಿ ಅಧ್ಯಕ್ಷ ದೇವಲಾಪುರ ಸಿದ್ದರಾಜು, ಮುಖಂಡರಾದ ಬೀರ್ವಾಳ್ ಬಸವರಾಜು, ಬಿ.ವಿ.ಬಸವರಾಜು, ಹೂವಿನಕೊಳ ಸಿದ್ದರಾಜು, ಅಗತ್ತೂರು ಅಂಕಪ್ಪ, ಹಾಜರಿದ್ದರು.

Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…