ಬಾಗಲಕೋಟೆ: ಜಿಲ್ಲೆಯಲ್ಲಿ ಏ.೪ ರಂದು ಆಚರಿಸಲ್ಪಡುವ ಡಾ.ಬಾಬು ಜಗಜೀವನರಾಂ ಅವರ ೧೧೮ನೇ ಜಯಂತಿ ಹಾಗೂ ಏ.೧೪ ರಂದು ಆಚರಿಸಲ್ಪಡುವ ಡಾ.ಬಿ.ಆರ್.ಅಂಬೇಡ್ಕರವರ ೧೩೪ನೇ ಜಯಂತಿ ಜಿಲ್ಲಾಡಳಿತದಿಂದ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಽಕಾರಿ ಜಾನಕಿ ಕೆ.ಎಂ. ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರವರ ಜಯಂತಿ ಆಚರಣೆ ಕುರಿತು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಏ. ೪ ರಂದು ಬೆಳಗ್ಗೆ ೯ ಗಂಟೆಗೆ ಸೆಕ್ಟರ ನಂ.೧೨ರಲ್ಲಿರುವ ದುರ್ಗಾದೇವಿ ದೇವಸ್ಥಾನದಿಂದ ಜಗಜೀವನರಾಂ ಭವನದ ವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಜಗಜೀವರಾಂ ಭವನದಲ್ಲಿ ಉಪನ್ಯಾಸ ಒಳಗೊಂಡ0ತೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಜಗಜೀವನರಾಂ ಅವರ ಕುರಿತು ಮಾತನಾಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರವರ ಜಯಂತಿ ಏ.೧೪ ರಂದು ಬೆಳಗ್ಗೆ ೧೦ ಗಂಟೆಗೆ ಸೆಕ್ಟರ ನಂ.೪೫ರಲ್ಲಿರುವ ಶ್ರೀಮಾತೆ ರಮಾಬಾಯಿ ಅಂಬೇಡ್ಕರ ಸಮುದಾಯ ಭವನದ ಆವರಣದಲ್ಲಿ ಅಂಬೇಡ್ಕರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ವಿವಿಧ ಜಾನಪದ ಕಲಾತಂಡಗಳ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ನಂತರ ಅಂಬೇಡ್ಕರ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲಾಗುತ್ತದೆ. ಅಂಬೇಡ್ಕರವರ ಜೀವನ ಚರಿತ್ರೆಯ ಕುರಿತು ಮಾತನಾಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸುವಂತೆ ಅಽಕಾರಿಗಳಿಗೆ ಸೂಚನೆ ನೀಡಿದರು.
ಡಾ.ಜಗಜೀವನರಾಂ ಹಾಗೂ ಡಾ.ಅಂಬೇಡ್ಕರವರ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಽಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಅಲ್ಲದೇ ಸಮುದಾಯದ ವಿವಿಧ ಸಂಘಟನೆಯ ಮುಖಂಡರು, ಸಾರ್ವಜನಿಕರು, ವಿವಿಧ ಸಂಘ ಸಂಸ್ಥೆಗಳ ಪದಾಽಕಾರಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಽಕಾರಿ ಜಾನಕಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಪ್ರಸನ್ನ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ, ತಹಸೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಸಮುದಾಯದ ಮುಖಂಡರಾದ ಮಹಾದೇವ ಹಾದಿಮನಿ, ಚಂದ್ರಶೇಖರ ಚಲವಾದಿ, ಯಲ್ಲಪ್ಪ ಸಂಖ್ಯಾನವರ, ವಿವೇಕಾನಂದ ಗರಸಂಗಿ, ಹನಮಪ್ಪ ಚಲವಾದಿ, ಮನೋಹರ ಕದಂ, ಸಂಜೀವ ಐಹೊಳ್ಳಿ, ಶ್ರೀಧರ ಚಿಕ್ಕಲಕಿ, ಜಯವಂತ ಗುದಿಗೆನ್ನವರ, ರಾಜು ಮನ್ನಿಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
