ಜಯಣ್ಣ, ಒಡೆಯರ್ ಹೆಸರಿನಲ್ಲಿ ಪ್ರಶಸ್ತಿ

blank

ಚಿತ್ರದುರ್ಗ: ಹೋರಾಟಗಾರರಾದ ಜಯಣ್ಣ, ಮುರುಘರಾಜೇಂದ್ರ ಒಡೆಯರ್ ಹೆಸರಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಸ್ಥಾಪಿಸಿ, ಅರ್ಹರಿಗೆ ಪ್ರತಿ ವರ್ಷ ನೀಡಲು ತೀರ್ಮಾನಿಸಲಾಗುವುದು ಎಂದು ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಪ್ರಕಾಶ್ ಬೀರಾವರ ತಿಳಿಸಿದರು.

blank

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಂ.ಜಯಣ್ಣ ಬಯಲುಸೀಮೆ ಚಿತ್ರದುರ್ಗಕ್ಕೆ ಭದ್ರಾ ಮೇಲ್ದಂಡೆ ನೀರಾವರಿ ಸೇರಿ ವಿವಿಧ ಚಳವಳಿ, ಒಡೆಯರ್ ದೌರ್ಜನ್ಯದ ವಿರುದ್ಧ ಹೋರಾಟ ನಡೆಸಿದ್ದಾರೆ. ಹೀಗಾಗಿ ಇಬ್ಬರ ಹೆಸರು ಚಿರಸ್ಥಾಯಿಯಾಗಿ ಉಳಿಸಲು ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದರು.

ಪ್ರಶಸ್ತಿಗೆ ಅರ್ಹರಾದ ಸೂಕ್ತರ ಹೆಸರನ್ನು ಅಂತಿಮಗೊಳಿಸಲು 2025ರ ಜನವರಿವರೆಗೂ ಅವಕಾಶವಿದ್ದು, ಸಾರ್ವಜನಿಕರೂ ಸಲಹೆ ನೀಡಬಹುದು. ಇದಕ್ಕಾಗಿ ಸಮಿತಿ ರಚಿಸಿ ಅಲ್ಲಿ ಆಯ್ಕೆ ಮಾಡಲಾಗುವುದು. ನಮ್ಮ ಸಮಿತಿಯಿಂದಲೇ ಪ್ರಶಸ್ತಿಯೊಂದಿಗೆ ತಲಾ 25ಸಾವಿರ ರೂ. ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

Share This Article

ಗ್ಯಾಸ್​ಗೆ ವಾಸನೆಯೇ ಇಲ್ಲ! ಹೀಗಿದ್ದರೂ​ ಸಿಲಿಂಡರ್​ ಲೀಕ್​ ಆಗ್ತಿದೆ ಅಂತ ತಿಳಿಸೋದು ಈ ಕೆಮಿಕಲ್​ ಮಾತ್ರ​ | Gas Leakage

Gas Leakage: ಇಂದು ಪ್ರತಿಯೊಬ್ಬರ ಮನೆಯಲ್ಲಿಯೂ ಎಲ್​ಪಿಜಿ ಗ್ಯಾಸ್​ ಸಿಲಿಂಡರ್​ಗಳನ್ನು ಬಳಕೆ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ…

ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..!  sweet

sweet:  ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …