ಜಾಗದ ವಿಷಯವಾಗಿ ಎರಡು ಗುಂಪುಗಳ ನಡುವೇ ಗಲಾಟೆ: ಇಬ್ಬರಿಗೆ ಗಾಯ

blank

ಜಾಗದ ವಿಷಯವಾಗಿ ಎರಡು ಗುಂಪುಗಳ ನಡುವೇ ಗಲಾಟೆ: ಇಬ್ಬರಿಗೆ ಗಾಯ

ಬೆಳಗಾವಿ: ಮಹಾನಗರ ಪಾಲಿಕೆ ಜಾಗದಲ್ಲಿ ಸಮುದಾಯ ಭವನ ನಿರ್ಮಾಣ ವಿಷಯವಾಗಿ ಎರಡು ಗುಂಪುಗಳ ನಡುವೆ ಮಂಗಳವಾರ ನಗರದ ಗಣಾಚಾರಿ ಗಲ್ಲಿಯಲ್ಲಿ ಗಲಾಟೆ ನಡೆದಿದೆ.
ಹಿಂದೂ ಕಾಟಿಕ ಸಮಾಜದ ಕೆಲವರಿಂದ ಪಾಲಿಕೆ ಜಾಗ ಒತ್ತುವರಿ ಆರೋಪಿಸಿ,ಗಣಾಚಾರಿ ಸಮಾಜದ ಯುವಕರಿಂದ ಒತ್ತುವರಿ ತೆರವಿಗೆ ಆಗ್ರಹಿಸಿದ್ದರು.
ಮಂಗಳವಾರ ಪಾಲಿಕೆ ಸಿಬ್ಬಂದಿಗಳಿಂದ ಒತ್ತುವರಿ ಗುರುತಿಸಲು ಆಗಮಿಸಿದಾಗ ಗಲಾಟೆ ಸಂಭವಿಸಿದೆ.
ಗಲಾಟೆ ವೇಳೆ ರಾಜು ತಳವಾರ ಮತ್ತು ಸುದೇಶ ಲಾಠಿ ಎಂಬುವವರಿಗೆ ಗಾಯಗೊಂಡಿದ್ದಾರೆ‌,ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ‌.
ಖಡೆ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎರಡು ಗುಂಪುಗಳ ನಡುವೆ ಸಮುದಾಯ ಭವನ ನಿರ್ಮಾಣ ವಿಷಯವಾಗಿ, ಭೂಮಿಯನ್ನು ಬಳಸುವುದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ.ಗಲಾಟೆ ವೇಳೆ ಓರ್ವ ವ್ಯಕ್ತಿಗೆ ಗಾಯವಾಗಿದೆ.ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆವೆ.ಗಾಯಾಳುಗಳ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಲಾಗುವುದು ಎಂದು ನಗರ ಪೊಲೀಸ್ ಉಪ ಆಯುಕ್ತ ರೋಹನ ಜಗದೀಶ ತಿಳಿಸಿದ್ದಾರೆ.

blank
Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…