ಜಿಡಿಪಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಪ್ರಮುಖ

blank

ಸಿಂಧನೂರು: ಸಹಕಾರಿ ಸಂಸ್ಥೆಗಳು ಜನಸಾಮಾನ್ಯರಿಗೆ ಅನುಕೂಲಕರವಾಗಿದ್ದು, ಯುವ ಜನತೆ ಸಹಕಾರಿ ಸಂಸ್ಥೆಗಳನ್ನು ಬೆಳೆಸಬೇಕೆಂದು ಸಿಂಧು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸಿಇಒ ಬಿ.ರಾಜಶೇಖರ ಹೇಳಿದರು.

ನಗರದ ಜ್ಞಾನಜ್ಯೋತಿ ಕಾಲೇಜಿನಲ್ಲಿ ಸೋಮವಾರ ಕಸಾಪದಿಂದ ಆಯೋಜಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಂದಿನಿ ಹಾಗೂ ಅಮುಲ್ ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಸಹಕಾರಿ ಸಂಸ್ಥೆಗಳೇ ಆಗಿವೆ. ತಾಲೂಕಿನಲ್ಲಿ ಈ ಹಿಂದೆ ಸಹಕಾರಿ ಸಂಸ್ಥೆಗಳು ಆರಂಭಕ್ಕೆ ಮನೋಹರ ಮಸ್ಕಿ ಶ್ರಮಿಸಿದ್ದಾರೆ. ದೇಶದ ಜಿಡಿಪಿಯಲ್ಲಿ ಸಹಕಾರಿ ಸಂಘಗಳ ಪಾತ್ರ ಕೂಡ ಇದೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ ಮಾತನಾಡಿ, ಇಡೀ ರಾಜ್ಯದಲ್ಲಿ 58 ದತ್ತಿಗಳನ್ನು ಹೊಂದಿರುವ ಏಕೈಕ ತಾಲೂಕು ಸಿಂಧನೂರು ಆಗಿದೆ. ಪಾನ್ ಕಾರ್ಡ್, ಆಧಾರ್ ಕಾರ್ಡ್‌ನಂತೆ ಕಸಾಪ ಅಜೀವ ಸದಸ್ಯತ್ವ ಕಾರ್ಡ್ ಪಡೆದು ಈ ಮಣ್ಣಿನ ಋಣ ತೀರಿಸುವ ಕೆಲಸ ಆಗಬೇಕಾಗಿದೆ ಎಂದು ತಿಳಿಸಿದರು.

ಮಸ್ಕಿಯ ಭ್ರಮರಾಂಬ ಪತ್ತಿನ ಸೌಹಾರ್ದ ಸಹಕಾರಿ ಸಿಇಒ ವೀರೇಶ ಹಿರೇಮಠ ಮಾತನಾಡಿ, ‘ಯುವಜನತೆ ಹಾಗೂ ಆರ್ಥಿಕ ಪ್ರಗತಿಯಲ್ಲಿ ಸಹಕಾರ ಸಂಘಗಳ ಪಾತ್ರ’ದ ಕುರಿತು ಉಪನ್ಯಾಸ ನೀಡಿದರು. ಪ್ರಮುಖರಾದ ಚನ್ನಬಸವ ಸಜ್ಜನ ವಕೀಲ, ಪತ್ರಕರ್ತ ಪಂಪಾಪತಿ ಬೇರ‌್ಗಿ, ಅಕ್ಷಯ ಆಹಾರ ಜೋಳಿಗೆ ಕಾರ್ಯದರ್ಶಿ ಅಶೋಕ ನಲ್ಲಾ ಇದ್ದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…