ಜಿಲ್ಲೆಯ 14 ಉಪ ನೋಂದಣಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

blank

ಜಿಲ್ಲೆಯ 14 ಉಪ ನೋಂದಣಿ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಎಲ್ಲ ಕಚೇರಿಗಳಿಗೆ ಆಗಮಿಸಿದ ಲೋಕಾಯುಕ್ತ ಪೊಲೀಸರ ತಂಡ ಅಲ್ಲಿನ ದಾಖಲಾತಿಗಳು ಹಾಗೂ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಸಂಜೆ 5.30ರ ವರೆಗೂ ಪರಿಶೀಲನಾ ಕಾರ್ಯ ನಡೆದಿದ್ದು, ಈ ವೇಳೆ ಕಚೇರಿಯಲ್ಲಿ ಯಾವುದೇ ಹಣಕಾಸು ಅಥವ ಕಡತಗಳನ್ನು ವಶಕ್ಕೆ ಪಡೆದಿಲ್ಲ ಎಂದು ತಿಳಿದು ಬಂದಿದೆ. ಈ ವೇಳೆ ಕಚೇರಿಯಲ್ಲಿ ಹಾಜರಿದ್ದ ಸಿಬ್ಬಂದಿಗಳು ಹಾಗೂ ಅಧಿಕಾರಿಗಳ ವಿಚಾರಣೆ ನಡೆಸಿದ್ದಾರೆ.
ಮೈಸೂರು ನಗರದ ರಾಮಕೃಷ್ಣನಗರದಲ್ಲಿರುವ ದಕ್ಷಿಣ, ತಾಲೂಕು ಕಚೇರಿಯಲ್ಲಿರುವ ಉತ್ತರ, ವಿಜಯನಗರದಲ್ಲಿರುವ ಪೂರ್ವ, ಡಾ.ರಾಜಕುಮಾರ್ ರಸ್ತೆಯಲ್ಲಿ ಇರುವ ಪಶ್ಚಿಮ, ಮುಡಾ ಕಚೇರಿ ಆವರಣದಲ್ಲಿ ಇರುವ ಕಚೇರಿ, ಕೆ.ಆರ್.ನಗರ, ಹುಣಸೂರು, ಎಚ್.ಡಿ.ಕೋಟೆ, ನಂಜನಗೂಡು, ಪಿರಿಯಾಪಟ್ಟಣ, ತಿ.ನರಸೀಪುರದ ಉಪ ನೋಂದಣಿ ಕಚೇರಿಗಳಲ್ಲಿಯೂ ಸಹ ಪರಿಶೀಲನೆ ನಡೆಸಲಾಗಿದೆ.

blank
Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…