blank

ಜೂಜಾಡುತ್ತಿದ್ದವರಿಂದ ಪೊಲೀಸರ ಮೇಲೆ ಹಲ್ಲೆ

ತಿಪಟೂರು: ಜಾತ್ರೆ ಸಂದರ್ಭ ಅಕ್ರಮವಾಗಿ ಜೂಜಾಡುತ್ತಿದ್ದವರನ್ನು ತಡೆಯಲು ಹೋದ ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ಯತ್ನ ನಡೆದಿದ್ದು, ಓರ್ವ ಸಿಬ್ಬಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ಹೊನ್ನವಳ್ಳಿ ಹೋಬಳಿ ಘಟಕಿನಕೆರೆಯಲ್ಲಿ ಬುಧವಾರ ಗ್ರಾಮದ ಶ್ರೀ ಕರಿಯಮ್ಮ ದೇವಿ ಜಾತ್ರೆ ಸಂದರ್ಭದಲ್ಲಿ ಸಮೀಪದ ತೋಟದಲ್ಲಿ ಅಕ್ರಮವಾಗಿ ಇಸ್ಪೀಟ್​ ಆಡುತ್ತಿರುವ ಬಗ್ಗೆ ಮಾಹಿತಿ ತಿಳಿದ ಹೊನ್ನವಳ್ಳಿ ಪೊಲೀಸ್​ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬಂಧಿಸಲು ಮುಂದಾದಾಗ ಇದು ನಮ್ಮೂರಿನ ಜಾತ್ರೆ, ನಮ್ಮ ಇಷ್ಟವೆಂದ ಕೆಲವರು ಪೊಲೀಸ್​ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ನಂದೀಶ್​ಗೆ ಗಾಯಗಳಾಗಿವೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಠಾಣೆಯ ಎಸ್​ಐ ಆರ್​.ರಾಜೇಶ್​ ಮತ್ತು ಸಿಬ್ಬಂದಿ ಜೂಜಾಡುತ್ತಿದ್ದ ಹರೀಶ್​ ಮತ್ತು ಚಂದ್ರಶೇಖರ್​ ಎಂಬುವವರನ್ನು ಬಂಧಿಸಿದ್ದಾರೆ. ಉಳಿದ 13 ಆರೋಪಿಗಳು ಪರಾರಿಯಾಗಿದ್ದಾರೆ. ಪಣಕ್ಕಿಟ್ಟಿದ್ದ 2,180 ರೂ. ಜಪ್ತಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…