ಜ್ಞಾನದ ಬೆಳಕು ಪಸರಿಸುವ ದೀಪೋತ್ಸವ

blank

ಮಾಂಜರಿ: ಮಠ-ಮಂದಿರಗಳಲ್ಲಿ ಜರಗುವ ದೀಪೋತ್ಸವ ಸಮಾಜದಲ್ಲಿ ಜ್ಞಾನದ ಬೆಳಕು ಪಸರಿಸುವುದರ ಜತೆಗೆ ಧಾರ್ಮಿಕ ಭಾವನೆಗಳ ಮೂಲಕ ಶಾಂತಿ ನೆಲೆಸುವಂತೆ ಮಾಡುತ್ತದೆ ಎಂದು ಶ್ರೀಶೈಲ್ ಪೀಠದ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಮೀಪದ ಸುಕ್ಷೇತ್ರ ಯಡೂರು ಕಾಡಸಿದ್ದೇಶ್ವರ ಸಂಸ್ಥಾನಮಠಲ್ಲಿ ಗುರುಕುಲ ಪಾಠಶಾಲೆಯ ಸಂಯುಕ್ತಾಶ್ರಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಲಕ್ಷ ದೀಪೋತ್ಸವ ಹಾಗೂ ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.

ಅಂಧಕಾರ ಕಳೆಯಲು ದೀಪಬೇಕು. ಅಜ್ಞಾನವೆಂಬ ಕತ್ತಲೆ ಕಳೆಯಲು ಗುರು ಬೇಕು. ಹೀಗಾಗಿ, ಅರಿವು ಹಾಗೂ ಆದರ್ಶಗಳ ಪರಿಪಾಲನೆಯಿಂದ ಜೀವನ ಉಜ್ವಲಗೊಳ್ಳುತ್ತದೆ. ಕಾರ್ತಿಕ ಮಾಸದ ಲಕ್ಷದೀಪೋತ್ಸವ ಪರಮಾತ್ಮನಿಗೆ ಪ್ರಿಯವಾದ ಸೇವೆ. ಸತ್ಸಂಗ ಹಾಗೂ ಧಾರ್ಮಿಕ ಕಾರ್ಯ ಭಕ್ತರ ಜ್ಞಾನದ ಹಸಿವನ್ನು ನೀಗಿಸಿ ಸುಜ್ಞಾನ ಜ್ಯೋತಿ ಬೆಳಗಿಸಿ ಸುಂದರ ಬದುಕನ್ನು ಕರುಣಿಸುತ್ತದೆ ಎಂದು ತಿಳಿಸಿದರು.

ವಿಜಯಪುರದ ಸಿದ್ದೇಶ್ವರ ದೇವರು ಮಾತನಾಡಿ, ಕಾರ್ತಿಕ ದೀಪೋತ್ಸವ ಜ್ಞಾನದ ಸಂಕೇತವಾಗಿದೆ. ಮನಸಿಗೆ ಬೆಳಕಿನ ಆಶಾಭಾವ ಮೂಡಿಸುವ ಜತೆಗೆ ಉತ್ತಮ ಆಚಾರ-ವಿಚಾರ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕಾಡಸಿದ್ದೇಶ್ವರ ಸಂಸ್ಥಾನಮಠದ ಅಡವಯ್ಯ ಅರಳಿಕಟ್ಟಿಮಠ, ಡಾ.ಪ್ರಭಾಕರ ಕೋರೆ ಕೋ-ಆ್ ಸೊಸೈಟಿ ನಿರ್ದೇಶಕ ಶ್ರೀಕಾಂತ ಉಮರಾಣಿ, ಈರಯ್ಯ ಮಠಪತಿ, ಮುತ್ತಯ್ಯ ಮಠದ, ಈಶ್ವರ ಹಿರೇಮಠ ಹಾಗೂ ಗುರುಕುಲ ಪೀಠದ ವಿದ್ಯಾರ್ಥಿಗಳು, ಭಕ್ತರು ಪಾಲ್ಗೊಂಡಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…