ಡಾ.ನಾರಾಯಣಗೌಡ ಪರ ಡಿ.ಎಸ್.ವೀರಯ್ಯ ಕಿಕ್ಕೇರಿ ಮತಯಾಚನೆ

blank

ಕೆ.ಆರ್.ಪೇಟೆ: ವಿಧಾನ ಪರಿಷತ್ ಮಾಜಿ ಸದಸ್ಯ, ರಾಜ್ಯ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಅಧ್ಯಕ್ಷ ಡಿ.ಎಸ್.ವೀರಯ್ಯ ಕಿಕ್ಕೇರಿ, ಸಿಂಧಘಟ್ಟ, ತೆಂಗಿನಘಟ್ಟ ಹಾಗೂ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರ ಬಡಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ನಾರಾಯಣಗೌಡ ಪರ ಬಿರುಸಿನ ಮತಪ್ರಚಾರ ನಡೆಸಿದರು.

ದಲಿತ ಬಂಧುಗಳ ಅಭಿವೃದ್ಧಿಗೆ ವಿವಿಧ ಕಾರ್ಯಕ್ರಮಗಳನ್ನು ನೀಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳ ಈಡೇರಿಕೆಗಾಗಿ ದುಡಿಯುತ್ತಿರುವ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಾ ಕಣದಲ್ಲಿರುವ ಸಚಿವ ನಾರಾಯಣಗೌಡ ಅವರಿಗೆ ದಲಿತ ಬಂಧುಗಳು ತಮ್ಮ ಅಮೂಲ್ಯವಾದ ಮತ ನೀಡಿ ಅವರ ಗೆಲುವಿಗೆ ಸಹಕರಿಸಬೇಕು ಎಂದರು.

ತಾಲೂಕಿನ ಜನತೆಯ ಶಾಂತಿ ನೆಮ್ಮದಿಯ ಜೀವನಕ್ಕಾಗಿ ಮತ್ತೊಮ್ಮೆ ನಾರಾಯಣಗೌಡ ಅವರನ್ನು ಶಾಸಕರನ್ನಾಗಿ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡುವ ಮೂಲಕ ಕೆ.ಆರ್.ಪೇಟೆ ತಾಲೂಕಿನ ರಾಜಕೀಯದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಬೇಕು. ದಲಿತ ಬಂದುಗಳ ಹಿತ ಕಡೆಗಣಿಸಿ ದಲಿತರನ್ನು ಜೀತಕ್ಕಿಟ್ಟುಕೊಳ್ಳುವ ಸಂಸ್ಕೃತಿ ಹೊಂದಿರುವ ಕಾಂಗ್ರೆಸ್ ಹಾಗೂ ದಲಿತ ವಿರೋಧಿ ಜೆಡಿಎಸ್ ಪಕ್ಷವನ್ನು ಸಾರಾಸಗಟಾಗಿ ತಿರಸ್ಕರಿಸಬೇಕು ಎಂದು ತಿಳಿಸಿದರು.

ದಲಿತ ನಾಯಕ ವೀರಯ್ಯ, ಸರಳ ಸಜ್ಜನ ರಾಜಕಾರಣಿಯಾಗಿ ಸರ್ವ ಧರ್ಮಗಳ ಜನರನ್ನೂ ಸಮಾನವಾಗಿ ಪ್ರೀತಿಸಿ ಗೌರವಿಸುವ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರನ್ನು ಭಾರೀ ಬಹುಮತಗಳಿಂದ ಗೆಲ್ಲಿಸಿಕೊಡಬೇಕು. ಸಾಮಾಜಿಕ ನ್ಯಾಯ ಗೆಲ್ಲಬೇಕು ಎಂದು ವೀರಯ್ಯ ಕೈಮುಗಿದು ಮನವಿ ಮಾಡಿದರು.

ಬಿಜೆಪಿ ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ರವಿ ಶಿವಕುಮಾರ್, ದಲಿತ ಜಾಗೃತಿ ಮಹಿಳಾ ವೇದಿಕೆಯ ಜಿಲ್ಲಾಧ್ಯಕ್ಷೆ ಕಮಲಾಕ್ಷಿ ನಾಗರಾಜು, ದಲಿತ ಮುಖಂಡರಾದ ಗಿರೀಶ್, ಬಾಲಕೃಷ್ಣ, ಮಹೇಶ್ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Share This Article

ಪ್ರತಿದಿನ ಶುಂಠಿ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಶುಂಠಿಯು ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ಮಸಾಲೆಯಾಗಿದೆ. ಇದನ್ನು ಪ್ರಪಂಚದಾದ್ಯಂತ ಅಡುಗೆ ಮತ್ತು ಗಿಡಮೂಲಿಕೆಗಳ ಪರಿಹಾರಗಳಲ್ಲಿ ಬಳಸಲಾಗುತ್ತದೆ.…

ವ್ಯಾಯಾಮವು ದೇಹಕ್ಕೆ ಮಾತ್ರವಲ್ಲ ಮೆದುಳಿಗೂ ಮುಖ್ಯ; ಹೇಗೆ.. ಇಲ್ಲಿದೆ ಮಾಹಿತಿ | Health Tips

ವಯಸ್ಸು ಹೆಚ್ಚಾದಂತೆ ಸ್ಮರಣಶಕ್ತಿ ದುರ್ಬಲಗೊಳ್ಳುತ್ತದೆ. ಆದರೆ ಇಂದಿನ ಕಾಲದಲ್ಲಿ ಚಿಕ್ಕ ವಯಸ್ಸಿನಲ್ಲೇ ವಿಷಯಗಳನ್ನು ನೆನಪಿಟ್ಟುಕೊಳ್ಳಲು ಅಥವಾ…

ಭಾರತದ ಈ 7 ನಗರಗಳಲ್ಲಿ ಮಾಂಸದೂಟ ಸಂಪೂರ್ಣ ನಿಷೇಧ! ಸಸ್ಯಾಹಾರಿ ಆಹಾರಕ್ಕೆ ಮಾತ್ರ ಅವಕಾಶ | No Meat City

No Meat Cities: ಭಾರತ ಒಂದು ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಪಾಕಪದ್ಧತಿಗಳ ದೇಶ. ಇಲ್ಲಿನ ಸಂಸ್ಕೃತಿ,…