ತಂದೆ-ತಾಯಿ ಸೇವೆಯಿಂದ ಬದುಕು ಸಾರ್ಥಕ

blank

ಹುಮನಾಬಾದ್: ತಂದೆ-ತಾಯಿ ಸೇವೆಯೇ ದೇವರ ಸೇವೆಯಾಗಿದ್ದು, ಅವರ ಮಾರ್ಗದರ್ಶನ ಹಾಗೂ ಆಶೀರ್ವಾದ ಶ್ರೀರಕ್ಷೆಯಾಗಿದೆ. ಅವರ ಸೇವೆ ಮಾಡುವುದರಿಂದ ಬದುಕು ಸಾರ್ಥಕವಾಗಲಿದೆ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಹೇಳಿದರು.

ಪಟ್ಟಣದ ಶ್ರೀ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಿರಿಯ ಪಾಲಕರ ದಿನಾಚರಣೆ ಹಾಗೂ ಸಂಸ್ಥೆಯ ಸಂಸ್ಥಾಪಕ ಎಂ.ಆರ್.ಗಾದಾ ಅವರ ೯೮ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗಾದಾ ಅವರ ಶಿಕ್ಷಣ ಸಂಸ್ಥೆಯಲ್ಲಿ ೩ ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸಂಸ್ಥೆ ಹೆಮ್ಮರವಾಗಿ ಬೆಳೆಸಿದ್ದಾರೆ. ಅದರ ಜತೆಗೆ ಮಕ್ಕಳಿಗೆ ಹಿರಿಯ ಪಾಲಕರ ದಿನಾಚರಣೆ ಆಚರಿಸುವ ಮೂಲಕ ಮಕ್ಕಳಲ್ಲಿ ಹಿರಿಯ ಪಾಲಕರ ಬಗ್ಗೆ ಗೌರವ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಮಾಜಿ ಶಾಸಕ ಸುಭಾಷ ಕಲ್ಲೂರ ಮಾತನಾಡಿ, ತಂದೆ-ತಾಯಿ, ಹಿರಿಯ ಸೇವೆ ಮಾಡದಿದ್ದಲ್ಲಿ ಜೀವನದಲ್ಲಿ ಯಶಸ್ಸು ದೊರೆಯಲು ಸಾಧ್ಯವಿಲ್ಲ. ತಂದೆ ತಾಯಿಯನ್ನು ಪೂಜ್ಯನೀಯ ಭಾವದಿಂದ ಗೌರವಿಸಿ ಎಂದರು.

ಸಾನ್ನಿಧ್ಯ ವಹಿಸಿದ್ದ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್​ನ ಅಧ್ಯಕ್ಷರಾದ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ಮಕ್ಕಳಿಗೆ ಸರ್ಕಾರಿ ನೌಕರಿ, ಶಿಕ್ಷಣ ಜತೆಗೆ ಸಂಸ್ಕಾರಯುತ ಶಿಕ್ಷಣ ಕೊಡುವುದು ಪಾಲಕರ ಹಾಗೂ ಶಿಕ್ಷಕರ ಆದ್ಯ ಕರ್ತವ್ಯವಾಗಿದೆ. ಹಿರಿಯರ ಹಾಗೂ ಪಾಲಕರ ಸೇವೆ ಮಾಡುವ ಮನೋಭಾವ ಮಕ್ಕಳು ಹೊಂದಬೇಕೆಂದು ಹೇಳಿದರು.

ಸಂಸ್ಥೆಯ ಅಧ್ಯಕ್ಷ ರಮೇಶ ಗಾದಾ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸತೀಶ ಪಾಟೀಲ್, ನಾರಾಯಣರಾವ ಜಾಜಿ, ಪ್ರಶಾಂತ ಉದಗೀರೆ, ಅನೀಲ ಪಲ್ಲೇರಿ, ನಾಗರಾಜ ವಾಸಗಿ, ಜಗದೀಶ ಅಗಡಿ, ಶಾಂತವೀರ ಸಲಗರ, ಸುರೇಖಾ ಜಾಜಿ, ದತ್ತಕುಮಾರ ಚಿದ್ರಿ, ಸಂಜೀವರೆಡ್ಡಿ ಸಾಯಿರೆಡ್ಡಿ, ಸಂದೀಪ ನಿಟ್ಟೂರಕರ, ಜಗನ್ನಾಥ ಕರಂಜಿ ಇತರರಿದ್ದರು.

ಅನಿತಾ ಪೋದ್ದಾರ ಪ್ರಾಸ್ತಾವಿಕ ಮಾತನಾಡಿದರು. ವೆಂಕಟೇಶ ಜಾಜಿ ಸ್ವಾಗತಿಸಿದರು. ಕಾಶಿಬಾಯಿ ಉಮಾರ್ಗೆ ನಿರೂಪಣೆ ಮಾಡಿದರು.

 

Share This Article

ವಾರದಲ್ಲಿ ಎರಡು ಬಾರಿ ಈ ಜ್ಯೂಸ್​ ಕುಡಿದರೆ ಸಾಕು ನಿಮ್ಮ ಕಿಡ್ನಿಗಳು ಫುಲ್​ ಕ್ಲೀನ್​ ಆಗಿಬಿಡುತ್ತವೆ! Kidney Health

Kidney Health : ಮೂತ್ರಪಿಂಡಗಳನ್ನು ಮಾನವ ದೇಹದ ಪ್ರಮುಖ ಅಂಗಗಳೆಂದು ಪರಿಗಣಿಸಲಾಗಿದೆ. ಈ ಮೂತ್ರಪಿಂಡಗಳು ರಕ್ತವನ್ನು…

ನಿಮ್ಮ ಸಿಬಿಲ್​ ಸ್ಕೋರ್​ ಕುಸಿದಿದ್ಯಾ? ರಾಕೆಟ್​ನಂತೆ ಜಿಗಿಯಲು ಈ​ ಸಿಂಪಲ್​ ಟಿಪ್ ಅನುಸರಿಸಿ​ | CIBIL Score

Cibil Score: ಇತ್ತೀಚಿನ ದಿನಗಳಲ್ಲಿ ಯಾರಿಗೆ ಹಣದ ಅವಶ್ಯಕತೆ ಇಲ್ಲ ಹೇಳಿ? ಬಡವನಿಂದ ಹಿಡಿದು ಶ್ರೀಮಂತರವರೆಗೂ…

ladies finger Benefits : ಬೆಂಡೆಕಾಯಿ ಒಳ್ಳೆಯದು, ಆದ್ರೆ ಅಪ್ಪಿತಪ್ಪಿಯೂ ಸಹ ಇವ್ರು ಬೆಂಡೆಕಾಯಿ ತಿನ್ನಲೇಬಾರದು..!

ladies finger Benefits : ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿಯು ಅನೇಕ ಪ್ರಯೋಜನಗಳನ್ನು ಹೊಂದಿದೆ ಎಂದು ನಮಗೆಲ್ಲರಿಗೂ…