ಧನಂಜಯಪುರದಲ್ಲಿ ರೈತರ ಪ್ರತಿಭಟನೆ

blank

ಅರಸೀಕೆರೆ: ಸಲ್ಲದ ಕಾರಣ ಮುಂದಿಟ್ಟು ಅರಣ್ಯ ಇಲಾಖೆ ಅಧಿಕಾರಿಗಳು ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿದ್ದಾರೆ ಎಂದು ಆರೋಪಿಸಿ, ತಾಲೂಕಿನ ಜಾವಗಲ್ ಹೋಬಳಿ ಧನಂಜಯಪುರ ಗ್ರಾಮದಲ್ಲಿ ಗುರುವಾರ ರೈತರು ಪ್ರತಿಭಟನೆ ನಡೆಸಿದರು.


ರಾಜ್ಯ ರೈತ ಸಂಘದ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ಮಾತನಾಡಿ, ಉಂಡಿಗನಾಳು, ಬಂದೂರು, ನೇರ‌್ಲಿಗೆ ಸೇರಿದಂತೆ ಕೆಲ ಹಳ್ಳಿಗಳ ರೈತರು ಹತ್ತಾರು ವರ್ಷಗಳಿಂದ ಭೂ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ. ಯಾವುದೇ ಮುನ್ಸೂಚನೆ ನೀಡದ ಅರಣ್ಯ ಇಲಾಖೆ ಅಧಿಕಾರಿಗಳು ಜಮೀನು ಬಿಟ್ಟುಕೊಡುವಂತೆ ನೋಟಿಸ್ ನೀಡುತ್ತಿರುವುದು ಅಕ್ಷಮ್ಯ. ಅಧಿಕಾರಿಗಳ ನಡೆ ಖಂಡಿಸಿ ಹೋರಾಟ ನಡೆಸಲಾಗುತ್ತಿದೆ. ನೋಟಿಸ್ ಕೊಡುವುದನ್ನು ತಕ್ಷಣವೇ ನಿಲ್ಲಸಬೇಕು ಎಂದು ಆಗ್ರಹಿಸಿದರು.


ಫೆ.20ರಂದು ಬೆಂಗಳೂರು ಚಲೋ ಪಾದಯಾತ್ರೆಗೆ ಕರೆ ನೀಡಲಾಗಿದೆ. ಮಾ.1ರಂದು ಅರಣ್ಯ ಭವನಕ್ಕೆ ತೆರಳಿ ಇಲಾಖೆಯ ಉನ್ನತಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ವಲಯ ಅರಣ್ಯಾಧಿಕಾರಿ ಅಮಿತ್ ಅವರಿಗೆ ಮನವಿ ಸಲ್ಲಿಸಿದರು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.


ಜಿಲ್ಲಾ ಸಂಚಾಲಕ ಅಯೂಬ್ ಪಾಷಾ, ಜವನಳ್ಳಿ ನಿಂಗಪ್ಪ, ವಕೀಲ ವೆಂಕಟೇಶ್, ಶಾಂತಮ್ಮ, ಏಜಾಜ್ ಪಾಷಾ ಸೇರಿ ಹಲವರು ನೇತೃತ್ವ ವಹಿಸಿದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…