ಧಾರ್ಮಿಕ ಕೇಂದ್ರಗಳು ಹೆಚ್ಚಾಗಲಿ

blank

ನುಗ್ಗೇಹಳ್ಳಿ: ಮನುಷ್ಯನಿಗೆ ಶಾಂತಿ, ನೆಮ್ಮದಿ ದೊರೆಯಬೇಕಾದರೆ ಧಾರ್ಮಿಕ ಕೇಂದ್ರಗಳು ಹೆಚ್ಚಾಗಿ ನಿರ್ಮಾಣವಾಗಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.

ಹೋಬಳಿಯ ಯಾಚನಘಟ್ಟ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಮುಳ್ಳಮ್ಮ ದೇವಿಯ ದೇಗುಲ ಲೋಕಾರ್ಪಣೆ ಹಿನ್ನೆಲೆಯಲ್ಲಿ ಗುರುವಾರ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನುಷ್ಯನ ದಿಕ್ಕು ತಪ್ಪಿಸುವ ವ್ಯಸನ ಕೇಂದ್ರಗಳು ಹೆಚ್ಚಾಗುತ್ತಿವೆ. ಇದನ್ನು ಸರಿಪಡಿಸಲು ಧರ್ಮ, ಅಧ್ಯಾತ್ಮ ಕೇಂದ್ರಗಳು ಹೆಚ್ಚಾಗಬೇಕು. ಹಳ್ಳಿಗಳ ಅಭಿವೃದ್ಧಿಗೆ ಒಗ್ಗಟ್ಟಾಗಿ ನಿಮ್ಮ ಹಳ್ಳಿ ಅಭಿವೃದ್ಧಿಪಡಿಸಿಕೊಳ್ಳಬೇಕು. ಸಂತೆಶಿವರ ಕೆರೆ ತುಂಬಿದ ಮೇಲೆ ಯಾಚನಘಟದ ಕೆರೆಗೂ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ, ಮಹಾಲಿಂಗಪ್ಪ, ಗುಡಿಗೌಡ ಮಧು, ಸಂತೋಷ್ ಕುಮಾರ್, ಕುಳ್ಳೇಗೌಡ, ಗುರು, ಶಿವಾನಂದ್, ಧನಂಜಯ, ಮಂಜುನಾಥ್, ಇತರರು ಹಾಜರಿದ್ದರು.

 

Share This Article

ಕುತ್ತಿಗೆ-ತಲೆ ನೋವನ್ನು ನಿರ್ಲಕ್ಷಿಸುತ್ತಿದ್ದೀರಾ?; ಎಚ್ಚರದಿಂದಿರಿ.. ಇದು ಅಪಾಯದ ಮುನ್ಸೂಚನೆ | Health Tips

ಕುತ್ತಿಗೆ ಮತ್ತು ಭುಜದ ಸುತ್ತಲಿನ ಪ್ರದೇಶದಲ್ಲಿನ ನೋವನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡಬೇಡಿ. ಏಕೆಂದರೆ ಇದು ಸರ್ವಿಕಲ್…

ಅಳದಿದ್ದರು ಕಣ್ಣೀರು ಬರುತ್ತಿದೆಯೇ; ತಜ್ಞರು ಸೂಚಿಸಿರುವ ಸಿಂಪಲ್ ಪರಿಹಾರ ಹೀಗಿದೆ.. Health Tips

ಸೌಂದರ್ಯವನ್ನು ಅಳೆಯಲು ಕಣ್ಣುಗಳು ಒಂದು ಪ್ರಮುಖ ಮಾನದಂಡವಾಗಿದೆ. ಇದು ಪ್ರಮುಖ ಇಂದ್ರಿಯಗಳಲ್ಲಿ ಒಂದಾಗಿದೆ. ಅದಿಲ್ಲದೆ ಜೀವನವನ್ನು…

ಮ್ಯಾರೇಜ್​ಗೆ ಸರಿಯಾದ ವಯಸ್ಸೇಷ್ಟು ಗೊತ್ತೆ?; ತಡವಾಗಿ ಮದುವೆಯಾಗುವುದರಿಂದ ಅನುಕೂಲ, ಅನಾನೂಕುಲಗಳೇನು? | Marriage

marriage: ಕೆಲ ದಶಕಗಳ ಹಿಂದೆ ಬಾಲ್ಯ ವಿವಾಹ ನಡೆಯುವುದು ಸಾಮಾನ್ಯವಾಗಿತ್ತು. ಬಳಿಕ ಕಾನೂನು ಕಣ್ತಪ್ಪಿಸಿ ಕದ್ದು…