ನಗರದಲ್ಲಿ ಕೆಲಕಾಲ ಗಾಳಿ-ಮಳೆ

blank

ಚಾಮರಾಜನಗರ: ಕೆಲಕಾಲ ಸುರಿದ ಬಿರುಗಾಳಿ ಸಹಿತ ಮಳೆಗೆ ಮರದ ಕೊಂಬೆ ಮುರಿದು ಬಿದ್ದರೇ, ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ಸಮಸ್ಯೆ ಉಂಟಾಯಿತು.

blank

ನಗರದಲ್ಲಿ ಸೋಮವಾರ ಸಂಜೆ ವೇಳೆಯಲ್ಲಿ ಕೆಲಕಾಲ ಬಿರಾಗಾಳಿ ಸಹಿತ ಮಳೆ ಸುರಿಯಿತು. ಪರಿಣಾಮವಾಗಿ ಜಿಲ್ಲಾಧಿಕಾರಿ ಭವನದ ರಸ್ತೆ ಹಾಗೂ ಇನ್ನಿತರೆ ರಸ್ತೆಗಳಲ್ಲಿ ಮಳೆನೀರು ನಿಂತು ಸಮಸ್ಯೆ ಉಂಟಾಯಿತು. ಹಲವು ರಸ್ತೆಗಳಲ್ಲಿ ಚರಂಡಿ ನೀರು ರಸ್ತೆಗಳಿಗೆ ಹರಿದು ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸಿದರು.

ದಿಡೀರ್ ಸುರಿದ ಗಾಳಿ-ಮಳೆಗೆ ಹಲವು ಕಡೆಗಳಲ್ಲಿ ಒಣಗಿದ್ದು ಮರದ ರೆಂಬೆ-ಕೊಂಬೆಗಳು ಮುರಿದು ಬಿದ್ದವು. ನಗರದ ತಾಲೂಕು ಕಚೇರಿಯ ಹಿಂಭಾಗದಲ್ಲಿರುವ ತಾಲೂಕು ಕೃಷಿ ಕಚೇರಿಯ ಆವರಣದಲ್ಲಿ ಮರದ ದೊಡ್ಡ ಕೊಂಬೆಯೊಂದು ಮುರಿದು ಬಿದ್ದಿತ್ತು. ಮರದ ಒಣಗಿದ ರೆಂಬೆಯೊಂದು ಕಿಟಕಿಯ ಗಾಜಿಗೆ ತಗುಲಿ ಗಾಜು ಹೊಡೆದು ಚೂರಾಯಿತು. ಸಂತೇಮರಹಳ್ಳಿ ವೃತ್ತದಿಂದ ಎಲ್‌ಐಸಿ ವೃತ್ತಕ್ಕೆ ಹೋಗುವ ಮಾರ್ಗ ಮಧ್ಯೆ ನಡೆಯುತ್ತಿರುವ ಸೇತುವೆ ಕಾಮಗಾರಿಗೆ ದಿಡೀರ್ ಮಳೆಯಿಂದಾಗಿ ಅಡಚಣೆ ಉಂಟಾಯಿತು.

Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…