ನಯನಾಗೆ ನ್ಯಾಯ ಒದಗಿಸಿ

blank

ಸಿಂಧನೂರು: ಪ್ರೀತಿಸಿ ಮದುವೆಯಾದ 10 ತಿಂಗಳ ಬಳಿಕ ಕೆಳಜಾತಿಗೆ ಸೇರಿದ್ದಾಳೆ ಎಂದು ಗಂಗಾವತಿಯ ನಯನಾ ಎಂಬುವವರನ್ನು ಮನೆಯಿಂದ ಹೊರಹಾಕಿರುವುದು ಖಂಡನೀಯ. ಕೂಡಲೇ ಈ ಪ್ರಕರಣ ದಾಖಲಿಸಿ ನಯನಾಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಉಪತಹಸೀಲ್ದಾರ್ ಚಂದ್ರಶೇಖರಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯಿಂದ ಮಂಗಳವಾರ ಮನವಿ ಸಲ್ಲಿಸಲಾಯಿತು.

ಸಿಂಧನೂರಿನ ಗಂಗಾನಗರದ ನಿವಾಸಿ ಸಿದ್ರಾಮಯ್ಯ ಗಂಗಾವತಿಯ ನಯನಾ ಅವರನ್ನು ಪ್ರೀತಿಸಿ ಕುಟುಂಬದ ಸಮಕ್ಷಮದಲ್ಲಿ ಮದುವೆಯಾಗಿ 10 ತಿಂಗಳು ಸಂಸಾರ ನಡೆಸಿದ್ದಾರೆ. ಈಗ ನಯನಾ ಕೆಳ ಜಾತಿಗೆ ಸೇರಿದ್ದಾಳೆ ಎಂದು ಮನೆಯಿಂದ ಹೊರಹಾಕಿರುವ ಸಿದ್ರಾಮಯ್ಯ ತಲೆ ಮರೆಸಿಕೊಂಡಿದ್ದಾರೆ. ನ್ಯಾಯಕ್ಕಾಗಿ ನಯನಾ ಪತಿ ಮನೆ ಮುಂದೆ ಪ್ರತಿಭಟನೆ ನಡೆಸಿದ್ದು, ನ್ಯಾಯ ಒದಗಿಸಬೇಕೆಂದು ಒತ್ತಾಯಿಸಲಾಯಿತು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…