ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿಯ ಶವ ಪತ್ತೆ

blank

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಬುಧವಾರ ಸುರಿದ ಭಾರಿ ಮಳೆಯ ಪರಿಣಾಮ ನೇಕಾರನಗರ ಸೇತುವೆ ಬಳಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಹುಸೇನಸಾಬ್ ಕಳಸ (58)ಎಂಬುವವರ ಶವ ಶುಕ್ರವಾರ ಮಧ್ಯಾಹ್ನ ಪತ್ತೆಯಾಗಿದೆ.

ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ಸ್ಥಳದಿಂದ 2.5 ಕಿಲೋ ಮೀಟರ್ ದೂರದಲ್ಲಿ ಮೃತ ದೇಹ ಸಿಕ್ಕಿದೆ. ಚರಂಡಿಯಲ್ಲಿ ಬಿದ್ದು ನಾಲಾ ಸೇರಿದ್ದ ಹುಸೇನಸಾಬ್ ದೇಹ ಗಿಡಗಂಟಿಗಳ ನಡುವೆ ಸಿಲುಕಿ ಹಾಕಿಕೊಂಡಿತ್ತು. ಜೆಸಿಬಿ ಬಳಸಿ ಗಿಡ ಗಂಟಿಗಳ ನಡುವೆ ಹುಡುಕಿದಾಗ ಶವ ಪತ್ತೆಯಾಗಿದೆ.

ಬೆಳಗಾವಿಯಿಂದ ಕರೆಯಿಸಲಾಗಿದ್ದ ಎಸ್​ಡಿಆರ್​ಎಫ್ ತಂಡ ಇಂದು ಬೆಳಗ್ಗೆಯಿಂದಲೇ ಶೋಧ ಕಾರ್ಯಾಚರಣೆ ನಡೆಸಿತ್ತು. ಅವರಿಗೆ ಹುಬ್ಬಳ್ಳಿ ಅಗ್ನಿಶಾಮಕ ದಳದ ಸಿಬ್ಬಂದಿ ಸಾಥ್ ನೀಡಿದ್ದರು.

ಹುಬ್ಬಳ್ಳಿಯಲ್ಲಿ ಬುಧವಾರ ಸಂಜೆಯಿಂದ ಮಧ್ಯರಾತ್ರಿಯವರೆಗೆ ಧಾರಾಕಾರ ಮಳೆಯಾಗಿತ್ತು. ಅಂದು ರಾತ್ರಿ ಬೈಕ್​ನಲ್ಲಿ ನೇಕಾರನಗರ ಸೇತುವೆ ಬಳಿ ರಸ್ತೆ ದಾಟುತ್ತಿದ್ದ ಹುಸೇನಸಾಬ್ ಕಳಸ ಆಯ ತಪ್ಪಿ ಬಿದ್ದು ನೀರಿನ ಸೆಳೆತಕ್ಕೆ ಸಿಲುಕಿ ಚರಂಡಿ ಸೇರಿ ನಾಲಾ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವ ವೇಳೆ ಈ ಅವಘಡ ಸಂಭವಿಸಿತ್ತು. ಸಮೀಪದಲ್ಲಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿಯಲ್ಲಿ ವ್ಯಕ್ತಿ ಬಿದ್ದಿರುವ ದೃಶ್ಯ ಮಾತ್ರ ಸೆರೆಯಾಗಿತ್ತು. ನೀರಿನಲ್ಲಿ ಕೊಚ್ಚಿ ಹೋಗಿರುವುದು ಖಚಿತ ಪಟ್ಟಿರಲಿಲ್ಲ. ಆತನ ಮೊಬೈಲ್ ಲೋಕೇಶನ್ ಸಹ ಅದೇ ಸ್ಥಳದಲ್ಲಿ ಇದ್ದಿದ್ದು ಟ್ರ್ಯಾಕ್ ಆಗಿತ್ತು.

ಇದರ ಆಧಾರದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಿಬ್ಬಂದಿ, ಶಹರ ತಹಸೀಲ್ದಾರ ಕಲ್ಲಗೌಡ ಪಾಟೀಲ ನೇತೃತ್ವದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರ ರಾತ್ರಿಯಿಂದಲೇ ಶೋಧ ಕಾರ್ಯಾಚರಣೆ ನಡೆಸಿದ್ದರು. ಗುರುವಾರವೂ ಶವ ಪತ್ತೆಯಾಗದಿದ್ದರಿಂದ ಬೆಳಗಾವಿಯಿಂದ ಎಸ್​ಡಿಆರ್​ಎಫ್ ತಂಡವನ್ನು ಕರೆಯಿಸಲಾಗಿತ್ತು.

Share This Article

ನೀರು, ಸೋಪು ಇಲ್ಲದೆ ಕೊಳಕಾದ ಸ್ವಿಚ್‌ಬೋರ್ಡ್‌ನ್ನು ಹೊಸದರಂತೆ ಮಾಡಲು ಇಲ್ಲಿದೆ ಸೂಪರ್‌ ಟಿಪ್ಸ್‌ | Switchboard

Switchboard: ಸಾಮಾನ್ಯವಾಗಿ ಮನೆಗಳಲ್ಲಿರುವ ವಿದ್ಯುತ್ ಸ್ವಿಚ್‌ಬೋರ್ಡ್‌ಗಳು ದಿನ ಕಳೆದಂತೆ ಕೊಳಕಾಗುತ್ತದೆ. ವಿಶೇಷವಾಗಿ ಅಡುಗೆಮನೆಯಲ್ಲಿರುವ ಸ್ವಿಚ್‌ಬೋರ್ಡ್‌ಗಳು ಬಹಳ…

ಈ ಆಹಾರಗಳ ಅತಿಯಾದ ಸೇವನೆಯಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು: ತಜ್ಞರ ಎಚ್ಚರಿಕೆ..! Health Tips

Health Tips: ಮೂತ್ರಪಿಂಡದಲ್ಲಿ ಕಲ್ಲುಗಳಿದ್ದರೆ ಸೊಂಟ, ಹೊಟ್ಟೆ ಮತ್ತು ಬೆನ್ನಿನಲ್ಲಿ ತೀವ್ರವಾದ ನೋವು ಉಂಟಾಗುತ್ತದೆ. ಈ…