ನೌಕರಿ ಕಾಯಂಗೊಳಿಸಿ

blank

ಲೋಕಾಪುರ: ಗ್ರಾಮ ಪಂಚಾಯಿತಿ ಸಿಬ್ಬಂದಿ ತಮ್ಮ ನೌಕರಿ ಕಾಯಂಗೊಳಿಸಲು ಒತ್ತಾಯಿಸಿ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿ, ಲೋಕಾಪುರ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳಿಂದ ವಾಟರ್‌ಮನ್, ಲೈನ್‌ಮನ್, ಹೆಲ್ಪರ್, ಸ್ವೀಪರ್, ಕರ ವಸೂಲಿಗಾರ ಎಂದು ಹಲವಾರು ವರ್ಷಗಳಿಂದ ಕಡಿಮೆ ಸಂಬಳದಲ್ಲಿ ಕೆಲಸ ನಿರ್ವಹಿಸುತ್ತ ಬಂದಿದ್ದು, ನಮ್ಮ ಜೀವನ ಅತಂತ್ರವಾಗಿದೆ. ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲೂ ಠರಾವು ಅನುಮೋದನೆಯಾಗಿದೆ. ಆದ್ದರಿಂದ ಗ್ರಾಮ ಪಂಚಾಯಿತಿಯಲ್ಲಿ ಕಾಯಂಗೊಳಿಸಿ ಪಟ್ಟಣ ಪಂಚಾಯಿತಿಯಲ್ಲಿಯೂ ಮುಂದುವರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಗ್ರಾಪಂ ಸಿಬ್ಬಂದಿ ಮನವಿ ಮಾಡಿದರು.

ಡಿಸಿಎಂ ಗೋವಿಂದ ಕಾರಜೋಳ ಮನವಿ ಸ್ವೀಕರಿಸಿ ಮಾತನಾಡಿ, ನಿಮ್ಮ ನೌಕರಿ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಒ ಜತೆ ಕೂಲಂಕಷವಾಗಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಬಿಜೆಪಿ ಮುಖಂಡ ಬಿ.ಎಲ್. ಬಬಲಾದಿ, ಗ್ರಾಪಂ ಸಿಬ್ಬಂದಿ ವಿಠ್ಠಲ ಗಸ್ತಿ, ರಾಘವೇಂದ್ರ ಮುರಗೋಡ, ಮಲ್ಲಪ್ಪ ರೊಡ್ಡಪ್ಪನವರ, ಕಲ್ಲಪ್ಪ ಭಜಂತ್ರಿ, ಹನುಮಂತ ಪರಸನ್ನವರ, ಪರಶುರಾಮ ಪರಸನ್ನವರ, ವಿಠ್ಠಲ ಮುದಕವಿ, ಲಕ್ಷ್ಮಣ ಭಜಂತ್ರಿ, ರಾಮಣ್ಣ ನಾಯ್ಕ, ಯಮನಪ್ಪ ಹುಗ್ಗಿ, ಅಶೋಕ ಕಾಳಮನ್ನವರ, ಪ್ರವೀಣ ಅರಳಿಕಟ್ಟಿ ಇತರರು ಇದ್ದರು.





Share This Article

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season

rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…

ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips

Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…