blank

ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳು ಮತ್ತೆ ಪೊಲೀಸ್ ವಶಕ್ಕೆ

blank

ಕಾಸರಗೋಡು: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಸೋಂಕಾಲ್ ಸುಭಾಷ್‌ನಗರದ ಮನೆಯೊಂದಕ್ಕೆ ನುಗ್ಗಿ ಐಫೋನ್, ಇಲೆಕ್ಟ್ರಾನಿಕ್ ಉಪಕರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕುಂಬಳೆ ಠಾಣೆ ಇನ್ಸ್‌ಪೆಕ್ಟರ್ ಕೆ.ಪಿ ವಿನೋದ್‌ಕುಮಾರ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಬೇರೊಂದು ಕಳವು ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಬಂಧಿಸಿ, ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿದ್ದ ಅವರನ್ನು ಕುಂಬಳೆ ಠಾಣೆ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಜೇಶ್ವರ ನಿವಾಸಿ ಮಹಮ್ಮದ್ ಶೀಹಾಬ್, ಮಂಗಳೂರು ಗಂಜಿಮಠ ನಿವಾಸಿಗಳಾದ ಮಹಮ್ಮದ್ ಸಪ್ವಾನ್, ಮಹಮ್ಮದ್ ಅರ್ಫಾಸ್ ಬಂಧಿತರು.

ಪ್ರಕರಣಕ್ಕೆ ಸಂಬಂಧಿಸಿ ಬಂದ್ಯೋಡು ಅಡ್ಕ ನಿವಾಸಿ ಅಶ್ರಫ್‌ಆಲಿ ಎಂಬಾತನನ್ನು ಈ ಹಿಂದೆ ಬಂಧಿಸಿ ವಿಚಾರಣೆಗೊಳಪಡಿಸಿದಾಗ ಈ ಆರೋಪಿಗಳ ಬಗ್ಗೆ ಮಾಹಿತಿ ನೀಡಿದ್ದನು. 2024 ಜೂನ್ 4ರಂದು ಸೋಂಕಾಲ್ ಸುಭಾಷ್‌ನಗರ ನಿವಾಸಿ ಆಯಿಷಾಯೂಸುಫ್ ಅವರ ಮನೆಗೆ ನುಗ್ಗಿ 1.20ಲಕ್ಷ ರೂ. ಮೌಲ್ಯದ ಇಲೆಕ್ಟ್ರಾನಿಕ್ ಸಾಮಗ್ರಿ ಕಳವು ನಡೆಸಲಾಗಿತ್ತು.

Share This Article

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…

ಎಷ್ಟೇ ನೀರು ಕುಡಿದ್ರೂ ನಿಮಗೆ ಪದೇ ಪದೇ ಬಿಕ್ಕಳಿಕೆ ಬರುತ್ತಿದೆಯೇ? ಈ ಮನೆಮದ್ದು ಟ್ರೈ ಮಾಡಿ Hiccups

Hiccups : ಬಿಕ್ಕಳಿಕೆ ಎಲ್ಲರಿಗೂ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆ. ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಪ್ರಾರಂಭವಾಗುತ್ತದೆ ಗಬಗಬನೆ…

18 ತಿಂಗಳ ನಂತರ ಸಿಂಹ ರಾಶಿಗೆ ಕೇತು ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ! Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…