ಪರಿಶ್ರಮದ ಅಧ್ಯಯನದಿಂದ ಯಶಸ್ಸು ಸಾಧ್ಯ

blank

ಬಾಗಲಕೋಟೆ: ಪರಿಶ್ರಮದ ಅಧ್ಯಯನದಿಂದ ಯಶಸ್ಸು ಪಡೆಯಲು ಸಾಧ್ಯವಿದೆ ಎಂದು ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕನವಾಡಿ ಹೇಳಿದರು.
ನಗರದ ಬಿವಿವಿ ಸಂಘದ ಇಂಜಿನಿಯರಿ0ಗ್ ಕಾಲೇಜಿನ ಸಭಾಭವನದಲ್ಲಿ ವಿದ್ಯಾಗಿರಿಯ ಬಸವೇಶ್ವರ ಕಲಾ ವಿಜ್ಞಾನ, ವಾಣಿಜ್ಯ ಮತ್ತು ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಜೀವನದಲ್ಲಿ ಪಿಯುಸಿ ಬಹಳ ಮಹತ್ವದ್ದು, ಈ ಎರಡು ವರ್ಷ ತಪ್ಪಿಸನಂತೆ ಅಧ್ಯಯನ ಮಾಡಬೇಕು. ಮೊಬೈಲ ಹಿತಮಿತವಾಗಿ ಬಳಕೆ ಮಾಡಿ ಅಧ್ಯಯನ ಶೀಲರಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸು ಮಾಡಿ ಯಶಸ್ಸು ಸಾಽಸಿ ಕುಟುಂಬ, ಸಮಾಜಕ್ಕೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ತಮ್ಮದೆಯಾದ ವಿಶೇಷ ಪ್ರತಿಭೆಯಿದೆ. ಅದನ್ನು ಗುರುತಿಸಿ ಸ್ಪಷ್ಟವಾದ ದಿಕ್ಕಿನಲ್ಲಿ ಸಾಗುವಂತಾಗಬೇಕು. ಕಲಾ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳು ಸರಿಸಮಾನಾದವುಗಳು. ಆಯಾ ವಿಭಾಗದಲ್ಲಿ ಅಧ್ಯಯನ ನಿರಂತರಾದವರು. ತಮ್ಮ ಸಂಪೂರ್ಣ ಸಾಮರ್ಥ್ಯ ಹಾಕಿ ಕೈಗಾರಿಕೋದ್ಯಮ, ವಿಶೇಷ ವಾಗ್ನಿ, ಆಡತಿಗಾರ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪಿಎಚ್‌ಡಿ ಪದವಿ ಪಡೆದ ಡಾ. ಪ್ರವೀನ ಚಿತ್ರಗಾರ ಅವರನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯ ಎಸ್.ಎಚ್.ವಟವಟಿ, ಎ.ಎಂ.ಪಾಟೀಲ, ವೀಣಾ ಕುಂದರಗಿ, ಎಂ.ಎಚ್.ಕಟಗೇರಿ, ಆರ್.ಸಿ.ಚಿನ್ನಾಕರ ಉಪಸ್ಥಿತರಿದ್ದರು. ಡಾ. ಮಾರುತಿ.ಎ.ಪಾಟೋಳಿ ಪರಿಚಯಿಸಿದರು. ಸ್ನೇಹಾ.ಪಿ.ಬಂಗಿ ವರದಿ ವಾಚನ ಮಾಡಿದರು. ಬಿ.ಐ.ಬೋಡನಾಯಕದಿನ್ನಿ ವಂದಿಸಿದರು. ಎಸ್.ಆರ್.ಕುಲಕರ್ಣಿ ನಿರೂಪಿಸಿದರು.

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…