ಪಿಕಾರ್ಡ್ ಬ್ಯಾಂಕ್‌ಗೆ ಸಿ.ವಿ.ಯತೀಶ್ ಅಧ್ಯಕ್ಷ

blank

ಕಡೂರು: ಪಟ್ಟಣದ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾಗಿ ಸಿ.ವಿ.ಯತೀಶ್ ಬುಧವಾರ ಅವಿರೋಧವಾಗಿ ಆಯ್ಕೆಯಾದರು.

blank

ಚುನಾವಣಾಧಿಕಾರಿಯಾಗಿ ಸಹಕಾರ ಸಂಘದ ಸಹಾಯಕ ಉಪನಿಬಂಧಕಿ ಅನುಪಮಾ ಕಾರ್ಯನಿರ್ವಹಿಸಿದರು.
ಅಭಿನಂದನಾ ಸಭೆಯಲ್ಲಿ ನೂತನ ಅಧ್ಯಕ್ಷ ಸಿ.ವಿ.ಯತೀಶ್ ಮಾತನಾಡಿ, ಬ್ಯಾಂಕಿನ ಎಲ್ಲ ನಿರ್ದೇಶಕರು ಪಕ್ಷಾತೀತವಾಗಿ ಆಯ್ಕೆಯಾಗಲು ಸಹಕರಿಸಿದ್ದು, ರೈತರ ಅಭಿವೃದ್ಧಿಗೆ ಇರುವ ಅತ್ಯಲ್ಪ ಕಾಲಾವಧಿಯಲ್ಲಿ ಒತ್ತು ನೀಡಲಾಗುತ್ತದೆ. 2024-25ನೇ ಸಾಲಿನಲ್ಲಿ ಬ್ಯಾಂಕ್ ನಿಂದ 6.28 ಕೋಟಿ ರೂ. ಸಾಲ ವಿತರಣೆಯಾಗಿದೆ. ಜೂನ್ ಅಂತ್ಯದೊಳಗೆ ಬಾಕಿ ಇರುವ ಎರಡನೇ ಕಂತಿನ ಸಾಲ ರೈತರಿಗೆ ವಿತರಿಸಲಾಗುವುದು. 3.25 ಕೋಟಿ ರೂ. ರೈತರಿಂದ ಸಾಲದ ಬಾಕಿ ಬರಬೇಕಿದೆ. ಶೇ.45.46 ಪಶು ಇಲಾಖೆಯಲ್ಲಿ ಸಾಧನೆ ಮಾಡಲಾಗಿದ್ದು, ಬ್ಯಾಂಕಿಗೆ ಈ ಸಾಲಿನಲ್ಲೂ ಪೂರ್ವ ಲಾಭ ಬರುವ ನಿರೀಕ್ಷೆ ಹೊಂದಲಾಗಿದೆ ಎಂದು ಹೇಳಿದರು.
ನಿರ್ದೇಶಕರಾದ ಎಚ್.ಎಸ್.ನಂಜುಂಡಪ್ಪ, ಕೆ.ಎಚ್.ರಂಗನಾಥ್, ಎಸ್.ವಿರೂಪಾಕ್ಷಪ್ಪ, ಸಿ.ಎಂ.ಕಲ್ಲೇಶಪ್ಪ, ಎಚ್.ಎಂ.ರೇವಣ್ಣಯ್ಯ, ಓಂಕಾರಪ್ಪ, ಕೆ.ಕೆ.ಪುಷ್ಪಲತಾ, ಎಂ.ಎನ್.ನಟರಾಜ್, ತಿಮ್ಮೇಗೌಡ, ಟಿ.ಶಂಕರಪ್ಪ, ಶ್ರೀನಿವಾಸಮೂರ್ತಿ, ರೇಣುಕಮ್ಮ, ಸದಸ್ಯರಾದ ಕೃಷ್ಣ ನಾಯಕ್, ಕೆ.ಎಸ್.ಪುಟ್ಟರಾಜು, ವ್ಯವಸ್ಥಾಪಕ ಹನುಮಂತರಾಯ, ಲೆಕ್ಕಾಧಿಕಾರಿ ಶಿವಾಜಿ ಲಮಾಣಿ, ಅನಂತ ನಾಯ್ಕ ಇತರರಿದ್ದರು.

Share This Article

ಒಣಗಿದ ಮಾವು, ಪೇರಲ ಮತ್ತು ಹಲಸಿನ ಎಲೆಗಳಿಗೆ ಹೆಚ್ಚಿದ ಬೇಡಿಕೆ! ಒಂದು ಪ್ಯಾಕೆಟ್ ಬೆಲೆ 500 ರೂ. dried mango leaves

dried mango leaves : ಹಿಂದೂ ಧರ್ಮದಲ್ಲಿ ಮಾವಿನ ಎಲೆಗಳಿಗೆ ವಿಶೇಷ ಸ್ಥಾನವಿದೆ. ಶುಭ ಸಮಾರಂಭಗಳು…

ಈ ಜ್ಯೂಸ್ ಕುಡಿದರೆ ಸಾಕು.. ತೂಕ ಇಳಿಸಿಕೊಳ್ಳಲು ಬೆವರು ಸುರಿಸಿ ಕಷ್ಟಪಡುವ ಅಗತ್ಯವಿಲ್ಲ! juice

juice: ತೂಕ ಇಳಿಸಿಕೊಳ್ಳಲು ಜನರು ಅನೇಕ ಪ್ರಯತ್ನಗಳನ್ನು ಮಾಡುತ್ತಾರೆ. ಅವರು ಜಿಮ್‌ನಲ್ಲಿ ಕಷ್ಟಪಟ್ಟು ಕೆಲಸ ಮಾಡುತ್ತಾರೆ,…

ಪ್ರತಿದಿನ ಸ್ನಾನ ಮಾಡುವ ಮೊದಲು ಇವುಗಳನ್ನು ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.. ಆಗ ನಿಮ್ಮ ಮುಖ ಖಂಡಿತವಾಗಿಯೂ ಸುಂದರವಾಗಿ ಹೊಳೆಯುತ್ತದೆ! Beauty Tips

Beauty Tips : ಮಹಿಳೆಯರು ಸಾಮಾನ್ಯವಾಗಿ ಸುಂದರವಾಗಿ ಕಾಣಲು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿವಿಧ ಕ್ರೀಮ್‌ಗಳನ್ನು ಬಳಸುತ್ತಾರೆ.…