blank

ಪುರಾತನ ಬಾವಿ ತಡೆಗೋಡೆ ಕುಸಿತ

blank

ರಾಣೆಬೆನ್ನೂರ: ಾಲೂಕಿನ ಚಿಕ್ಕಹರಳಹಳ್ಳಿಯ ಬಸವೇಶ್ವರ ದೇವಸ್ಥಾನ ಮುಂಭಾಗದ ಪುರಾತನ ಬಾವಿಯ ತಡೆಗೋಡೆ ಕುಸಿದು ಬಿದ್ದಿದ್ದು, ಗ್ರಾಮಸ್ಥರು ಭಯದ ವಾತಾವರಣದಲ್ಲಿ ಓಡಾಡುವಂತಾಗಿದೆ.

ಕಳೆದ ವರ್ಷ ಸುರಿದ ಮಳೆಯಿಂದ ಬಾವಿಯ ತಡೆಗೋಡೆ ಕುಸಿದು ಬಿದ್ದಿದೆ. ಬಾವಿ 300 ಅಡಿಗೂ ಅಧಿಕ ಆಳವಿದೆ. ದೇ ಮಾರ್ಗವಾಗಿ ನಿತ್ಯವೂ ನೂರಾರು ಜನ ಓಡಾಡುತ್ತಾರೆ. ಆದರೆ, ಬಾವಿಗೆ ತಡೆಗೋಡೆ ಇಲ್ಲದ ಕಾರಣ ಮಕ್ಕಳು, ವೃದ್ಧರು ಆಯತಪ್ಪಿ ಬಿದ್ದು ಪ್ರಾಣಹಾನಿಯಂಥ ಘಟನೆ ಸಂಭವಿಸಿದರೆ ಯಾರು ಹೊಣೆ ಎಂಬುದು ಪ್ರಶ್ನೆಯಾಗಿದೆ.

ಚಿಕ್ಕಹರಳಹಳ್ಳಿ ಚಿಕ್ಕಕುರುವತ್ತಿ ಗ್ರಾಪಂ ವ್ಯಾಪ್ತಿಗೆ ಬರುತ್ತದೆ. ಬಾವಿಗೆ ತಡೆಗೋಡೆ ಮಾಡುವಂತೆ ಹಾಗೂ ತಾತ್ಕಾಲಿಕವಾಗಿ ತಂತಿಯ ಜಾಲರಿ ಅಳವಡಿಸುವಂತೆ ಪಿಡಿಒಗೆ ಹಲವು ಬಾರಿ ಮನವಿ ಮಾಡಿದ್ದೇವೆ. ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, ಈ ಕುರಿತು ಕೇಳಿದರೆ ಉಡಾಫೆಯಾಗಿ ಉತ್ತರಿಸುತ್ತಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಗ್ರಾಮದ ನಿವಾಸಿ ಚಿತ್ತರಂಜನ ಮರೋಳ ಒತ್ತಾಯಿಸಿದ್ದಾರೆ.

ಚಿಕ್ಕಹರಳಹಳ್ಳಿ ಗ್ರಾಮದ ಬಾವಿ ಸಮಸ್ಯೆ ಕುರಿತು ಪಿಡಿಒಗೆ ಸೂಚಿಸಿ ಕೂಡಲೆ ಅದಕ್ಕೆ ತಡೆಗೋಡೆ ನಿರ್ವಿುಸಲು ಹೇಳುತ್ತೇನೆ. ಅಲ್ಲಿಯವರೆಗೆ ತಾತ್ಕಾಲಿಕವಾಗಿ ಮುಳ್ಳಿನ ಗಿಡಗಳನ್ನಿಟ್ಟು ಆ ಭಾಗದಲ್ಲಿ ಜನತೆ ಓಡಾಡದಂತೆ ಎಚ್ಚರವಹಿಸಲು ತಿಳಿಸುತ್ತೇನೆ. | ಎಸ್.ಎಂ. ಕಾಂಬಳೆ, ತಾಪಂ ಇಒ

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…