ಪ್ರಯಾಣಿಕರಿಗೆ ಸಂಕಷ್ಟ ತಂದ ಸೇತುವೆ ಕಾಮಗಾರಿ

27kls2 road

ಕಳಸ: ಕಳಸ ಮತ್ತು ಹೊರನಾಡಿನ ಸಂಪರ್ಕ ಸೇತುವೆಯಾಗಿರುವ ಹೆಬ್ಬಾಳೆ ಸೇತುವೆ ಕಾಮಗಾರಿ ವಿಳಂಬವಾಗಿರುವುದರಿಂದ ಪ್ರವಾಸಿಗರು ಮತ್ತು ಸ್ಥಳೀಯರು ನಿತ್ಯತೊಂದರೆ ಅನುಭವಿಸುವಂತಾಗಿದೆ. ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಕಳಸದಿಂದ ಹೊರನಾಡಿಗೆ ಹಳುವಳ್ಳಿ-ದಾರಿಮನೆ ಮಾರ್ಗವಾಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಅದರೆ ಈ ರಸ್ತೆ ಕಿರಿದಾಗಿರುವುದರಿಂದ ದಿನನಿತ್ಯ ರಸ್ತೆಯಲ್ಲಿ ಸಂಚರಿಸುವ ಪ್ರವಾಸಿಗರು, ಸ್ಥಳೀಯರು ಕಿರಿಕಿರಿ ಅನುಭವಿಸುವಂತಾಗಿದೆ.
ಕಳಸ-ಹೊರನಾಡಿನ ಸಂಪರ್ಕ ಸಾಧಿಸುವ ಹೆಬ್ಬಾಳೆ ಸೇತುವೆ ಕಾಮಗಾರಿ ಅಂತಿಮ ಹಂತ ತಲುಪಿದೆ. ಈ ಸೇತುವೆ ಕಾಮಗಾರಿ ನಡೆಸಲು 25ರವರೆಗೆ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಈ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಇನ್ನು ಕೆಲವು ದಿನ ಈ ಸೇತುವೆ ವಾಹನ ಸಂಚಾರಕ್ಕೆ ಮುಕ್ತವಾಗುವ ಲಕ್ಷಣಗಳು ಕಾಣುತ್ತಿಲ್ಲ.
ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದರಿಂದ ಪರ್ಯಾಯ ಮಾರ್ಗವಾಗಿ ಹೊರನಾಡು ಮತ್ತು ಆ ಭಾಗದ ಹಲವು ಹಳ್ಳಿಗಳಿಗೆ ತೆರಳಲು ಹಳುವಳ್ಳಿ-ದಾರಿಮನೆ ಮಾರ್ಗವಾಗಿ ತಲುಪಲು ಅನುಮತಿ ನೀಡಲಾಗಿತ್ತು. ಆದರೆ ಈ ರಸ್ತೆ ಅತ್ಯಂತ ಕಿರಿದಾಗಿದ್ದು ಸಾಕಷ್ಟು ತಿರುವುಗಳು ಇರುವುದರಿಂದ ಪ್ರತಿನಿತ್ಯ ವಾಹನ ಅಪಘಾತಗಳು ಮತ್ತು ಟ್ರಾಫಿಕ್‌ಜಾಮ್ ಉಂಟಾಗಿ ರಸ್ತೆ ಮಧ್ಯದಲ್ಲಿ ಪ್ರವಾಸಿಗರ ನಡುವೆ ನಿತ್ಯ ಸಂಘರ್ಷ ನಡೆಯುತ್ತಿದೆ.

blank
Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…