blank

ಫೆ.೨೩ ರಂದು ರಾಜ್ಯಮಟ್ಟದ ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿ ಪ್ರದಾನ

blank

ಬಾಗಲಕೋಟೆ: ಜಿಲ್ಲೆಯ ಯಂಡಿಗೇರಿ ತ್ರೇವೇಣಿ ಶೆಲ್ಲಿಕೇರಿ ಪ್ರತಿಷ್ಠಾನದಿಂದ ಕೊಡ ಮಾಡುವ ೨೦೨೪ನೇ ಸಾಲಿನ ರಾಜ್ಯಮಟ್ಟದ ತ್ರಿವೇಣಿ ಶೆಲ್ಲಿಕೇರಿ ಸಾಹಿತ್ಯ ಪ್ರಶಸ್ತಿಯನ್ನು ಮೂರು ಕೃತಿಗಳಿಗೆ ನೀಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದಿಂದ ಕಥಾಸಂಕಲನ, ಕಾದಂಬರಿ ಮತ್ತು ಕವನಸಂಕಲನ ವಿಭಾಗಗಳಲ್ಲಿ ಕೃತಿಗಳನ್ನು ಆಹ್ವಾನಿಸಲಾಗಿತ್ತು. ಮೂರು ಸಾಹಿತ್ಯ ಪ್ರಕಾರಗಳಲ್ಲಿ ೧೧೧ ಕೃತಿಗಳು ಸ್ಪರ್ಧೆಗೆ ಬಂದಿದ್ದವು. ಮೂರು ಪ್ರಕಾರ ಸಾಹಿತ್ಯ ಕೃತಿಗಳಲ್ಲಿ ಕಾದಂಬರಿಯಲ್ಲಿ ಗುರುಪ್ರಸಾದ್ ಕಂಟಲಗೆರೆಯವರ ಅಟ್ರಾಸಿಟಿ, ಕಥಾ ಸಂಕಲನದಲ್ಲಿ ಗೋಕಾಕದ ಲಕ್ಷ÷್ಮಣ ಶರೆಗಾರಯವರ ತಿದಿಯ ತುದಿಗೆ ಬೆಂಕಿಯ ಉಗುಳು, ಚಿಕ್ಕಮಂಗಳೂರಿನ ಶಶಿ ತರೀಕೆರೆಯ ಪ್ಯೂಪಾ ಕವನ ಸಂಕಲನ ಆಯ್ಕೆಯಾಗಿದೆ. ಪ್ರಶಸ್ತಿ ವಿಜೇತರಿಗೆ ೧೦ ಸಾವಿರ ರೂ., ಪ್ರಶಸ್ತಿ ಫಲಕ , ಗೌರವ ಸನ್ಮಾನ ನೀಡಲಾಗುವುದು ಎಂದರು.

ಫೆ.೨೩ ರಂದು ಬೆಳಗ್ಗೆ ೧೦.೩೦ಕ್ಕೆ ನವನಗರದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ನಡೆಯಲಿದೆ. ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಖ್ಯಾತ ಕಾದಂಬರಿಕಾರ ಮತ್ತು ಕತೆಗಾರ ಶ್ರೀಧರ ಬಳಿಗಾರ, ಕೇಶವ ಮಳಗಿ ಆಗಮಿಸಲಿದ್ದಾರೆ. ಕಾರ್ಯಕ್ರಮ ಜಿಲ್ಲಾಽಕಾರಿ ಜಾನಕಿ ಕೆ.ಎಂ. ಉದ್ಘಾಟಿಸಲಿದ್ದಾರೆ. ತೋಟಗಾರಿಕೆ ವಿವಿ ಕುಲಪತಿ ಡಾ.ವಿಷ್ಣುವರ್ಧನ ಮುಖ್ಯ ಅಥಿತಿಗಳಾಗಿ ಆಗಮಿಸಲಿದ್ದಾರೆ ಎಂದು ಹೇಳಿದರು.
ಮುಖಂಡರಾದ ಮಲ್ಲಿಕಾರ್ಜುನ ಶೆಲ್ಲಿಕೇರಿ, ಚಂದ್ರಶೇಖರ ಕಾಳನ್ನವರ, ಆರ್.ಸಿ.ಚಿತ್ತವಾಡಗಿ, ಮನಹೋರ ಬ್ಯಾಹಟ್ಟಿ ಇದ್ದರು.
=========

Share This Article

ನರ ದೌರ್ಬಲ್ಯಕ್ಕೆ ನೆಲ್ಲಿಕಾಯಿಯೇ ರಾಮಬಾಣ! ಇದರ ಅನೇಕ ಪ್ರಯೋಜನಗಳ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುತ್ತೆ | Gooseberry

Gooseberry : ಪ್ರಕೃತಿಯಲ್ಲಿ ಹಲವು ರೀತಿಯ ಔಷಧಿಗಳಿವೆ. ಅವು ನಮ್ಮ ಕಣ್ಣಿಗೆ ಗೋಚರಿಸುತ್ತಿದ್ದರೂ ಅವುಗಳಲ್ಲಿರುವ ವಿಶೇಷ…

ಕೊರಿಯನ್ನರು, ಚೀನಿಯರು, ಜಪಾನಿಯರು ರಾತ್ರಿ ಹೊತ್ತು ಸ್ನಾನ ಮಾಡೋದೇಕೆ?ಅಚ್ಚರಿಯ ಮಾಹಿತಿ ಇಲ್ಲಿದೆ..! Bathing

Bathing: ದೈಹಿಕ ನೈರ್ಮಲ್ಯ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿದಿನ ಸ್ನಾನ ಮಾಡಲು ಆರೋಗ್ಯ ತಜ್ಞರು ಶಿಫಾರಸು…

ಬೇಸಿಗೆಯಲ್ಲಿ ಮಾವಿನ ಹಣ್ಣು ತಿನ್ನಿ! ಅನಾರೋಗ್ಯ ದೂರ ಮಾಡಿ…Mango

ಬೆಂಗಳೂರು: ( Mango ) ಬೇಸಿಗೆಯಲ್ಲಿ  ಹಣ್ಣುಗಳನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.…