ಬೂದು ನೀರು ನಿರ್ವಹಣೆ ಕಾಮಗಾರಿ ತ್ವರಿತಕ್ಕೆ ತಾಕೀತು

blank

ಚಿತ್ರದುರ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಎಸ್.ಸಿ. ಮಹೇಶ್ ಈಚೆಗೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಘನತ್ಯಾಜ್ಯ ನಿರ್ವಹಣೆ, ಬೂದು ನೀರು ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಮೊಳಕಾಲ್ಮೂರು ತಾಲೂಕಿನ ಕೆರೆಕೊಂಡಾಪುರದ ಸ್ವಚ್ಛ ಸಂಕೀರ್ಣ ಘಟಕದಲ್ಲಿ ಘನ ತ್ಯಾಜ್ಯನಿರ್ವಹಣೆ ಹಾಗೂ ಕಾರ್ಯಾಚರಣೆ, ಮಲ ತ್ಯಾಜ್ಯ ಸಂಸ್ಕರಣಾ ಘಟಕ ಪರಿಶೀಲಿಸಿದರು.
ಹಾನಗಲ್‌ನಲ್ಲಿ ಬೂದು ನೀರು ನಿರ್ವಹಣೆಗೆ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ ನಿರ್ಮಾಣ ಕಾಮಗಾರಿ ವೀಕ್ಷಿಸಿದರು. ನಂತರ ಮೊಳಕಾಲ್ಮೂರು ತಾಪಂನಲ್ಲಿ ಅಧಿಕಾರಿಗಳ ಸಭೆ ನಡೆಸಿ ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಚಳ್ಳಕೆರೆ ತಾಪಂನಲ್ಲೂ ಅಧಿಕಾರಿಗಳ ಸಭೆ ನಡೆಸಿದರು. ನಗರಂಗೆರೆ ಗಾಪಂ ಶಾಲಾ ಸಮುದಾಯ ಶೌಚಗೃಹ, ಹಳೆಯ ಸ್ವಚ್ಛ ಸಂಕೀರ್ಣ ಘಟಕ, ಹೊಸ ಸ್ವಚ್ಛ ಸಂಕೀರ್ಣ ಘಟಕ ಮತ್ತು ಮಲತ್ಯಾಜ್ಯ ಸಂಸ್ಕರಣ ಘಟಕ ಕಾಮಗಾರಿ ಪರಿಶೀಲನೆ ನಡೆಸಿದರು.
ಹಿರಿಯೂರು ತಾಲೂಕು ವಿವಿ ಪುರದ ಸ್ವಚ್ಛ ಸಂಕೀರ್ಣ ಹಾಗೂ ಮಲ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಭೇಟಿ ನೀಡಿದರು. ಜಿಪಂ ಸಿಪಿಒ ಸಿ.ಎನ್. ಗಾಯತ್ರಿ, ಸಹಾಯಕ ಯೋಜನಾಧಿಕಾರಿ ಡಿ.ಎಸ್. ಸುಮಾ, ಇಒಗಳಾದ ಹನುಮಂತಪ್ಪ, ಶಶಿಧರ್ ಇತರರು ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…