ಭೀಮಾತೀರದ ಫೈರಿಂಗ್ ಪ್ರಕರಣ : ಅಖಾಡಕ್ಕಿಳಿದ ಐಜಿಪಿ

blank

ವಿಜಯಪುರ: ಭೀಮಾತೀರದ ಸಾಹುಕಾರ್ ಮೇಲೆ ಗುಂಡಿನ ದಾಳಿಯಲ್ಲಿ ಪ್ರಕರಣ ಸಾಕಷ್ಟು ವಲಯದಲ್ಲಿ ತನಿಖೆ ಮಾಡಲಾಗುತ್ತಿದೆ. ಇನ್ನು ಹಳೆಯ ಕೇಸ್ ಕುರಿತು ಕೂಡ ತನಿಖೆ ಮಾಡಲಾಗುವುದು ಎಂದು ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಮಾಹಿತಿ ನೀಡಿದರು..

ವಿಜಯಪುರದ ಅರಕೇರಿ ತಾಂಡಾದ ಬಳಿಯ ಘಟನಾ ಸ್ಥಳದಲ್ಲಿ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಪ್ರಕರಣ ಸಾಕಷ್ಟು ಮಾಹಿತಿ ಕಲೆಹಾಕಲಾಗಿದೆ. ಅಲ್ಲದೇ, ಐದು ಬೈಕ್, ಒಂದು ಟಿಪ್ಪರ, ಪೆಟ್ರೋಲ್ ಬಾಂಬ್, ಮಚ್ಚು ಜಪ್ತಿ ಮಾಡಲಾಗಿದೆ ಎಂದರು. ಇನ್ನು ಶೂಟೌಟ್ ಗೂ ಮುನ್ನ ದುಷ್ಕರ್ಮಿಗಳು ಎಲ್ಲ ರೀತಿಯ ತಯಾರಿ ಮಾಡಿಕೊಂಡು ಬಂದಿದ್ರು, ಅಲ್ಲದೇ, ವಿವಿಧ ವಾಹನಗಳಲ್ಲಿ ಪರಾರಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದರು..

ಈ ಗ್ಯಾಂಗ್ ವಾರನಲ್ಲಿ ಸುಮಾರು 15 ರಿಂದ 20 ಜನರು ಭಾಗಿಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದ್ದು, ವಿಜಯಪುರ, ಬಾಗಲಕೋಟ ಹಾಗೂ ಬೆಳಗಾವಿಯ 1500 ಪೊಲೀಸರ ಸಿಬ್ಬಂದಿ ವಿವಿಧ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ ಎಂದರು…

ಅಲ್ಲದೇ, ಹಳೆಯ ಚಡಚಣ ಕೇಸ್ ನಲ್ಲೂ ತನಿಖೆ ಮಾಡಲಾಗುವುದು. ಮತ್ತೇ ಕಲಬುರಗಿ, ವಿಜಯಪುರದಲ್ಲಿ ಹಳೆಯ ಗ್ಯಾಂಗ್ ಆ್ಯಕ್ಟಿವ್ ಆಗಿವೆ. ಅದರ ಬೆನ್ನಿನಲ್ಲೂ ತನಿಖೆ ಕೈಗೊಳ್ಳಲಾಗುವುದು. ಒಂದು ವಾರದ ಒಳಗೆ ದುಷ್ಕರ್ಮಿಗಳನ್ನು ಬಂಧಿಸಲಾಗುವುದು ಎಂದರು…

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…