ಮಕ್ಕಳಲ್ಲಿ ಸಂಸ್ಕಾರ ಮೂಡಿಸಿ

12 TKE 1,1 darmika

ತರೀಕೆರೆ: ಮುಂದಿನ ತಿಂಗಳು ನಡೆಯಲಿರುವ ರಥೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದ ಶ್ರೀ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇಗುಲದಲ್ಲಿ ಸ್ಕಂದ ಮಾತಾ ವಿಪ್ರ ಮಹಿಳಾ ಸಂಘದಿಂದ ಲೋಕ ಕಲ್ಯಾಣಾರ್ಥ ದೇವರಿಗೆ ಕುಂಕುಮಾರ್ಚನೆ ನಡೆಯಿತು.
ಸ್ಕಂದ ಮಾತಾ ವಿಪ್ರ ಮಹಿಳಾ ಸಂಘದ ಅಧ್ಯಕ್ಷೆ ಭಾಮಾ ಮಾತನಾಡಿ, ದೇವರ ಅರ್ಚನೆ ಮತ್ತು ಆರಾಧನೆ ಮೂಲಕ ನಮ್ಮ ಸಂಸ್ಕೃತಿ, ಸಂಸ್ಕಾರ, ಪರಂಪರೆ ಉಳಿಸಿ ಬೆಳೆಸುವ ಕಾರ್ಯ ಮಾಡಲಾಗುತ್ತಿದೆ. ಈ ಮೂಲಕ ಮುಂದಿನ ಪೀಳಿಗೆಗೆ ಇದರ ಅರಿವು, ಜವಾಬ್ದಾರಿ ಹಸ್ತಾಂತರಿಸುವ ಅನಿವಾರ್ಯತೆ ಇದೆ ಎಂದರು.
ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದ್ದು, ಮಕ್ಕಳಲ್ಲಿ ಶ್ರದ್ಧಾಭಕ್ತಿ ಹೆಚ್ಚಿಸಿ ಸನ್ಮಾರ್ಗದಲ್ಲಿ ಸಾಗುವಂತೆ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಅರ್ಚಕ ಸತ್ಯನಾರಾಯಣ ಭಟ್ ಆಚಾರ್ಯ ದೇವರಿಗೆ ಕುಂಕುಮಾರ್ಚನೆ ನೆರವೇರಿಸಿ ಮಾತನಾಡಿ, ಪೂಜಾ ಕೈಂಕರ್ಯಗಳಿಂದ ಮನಸ್ಸಿಗೆ ನೆಮ್ಮದಿ, ಶಾಂತಿ ದೊರೆಯಲಿದೆ ಎಂದರು. ಸ್ಕಂದ ಮಾತಾ ವಿಪ್ರ ಮಹಿಳಾ ಸಂಘದ ಪದಾಧಿಕಾರಿಗಳಾದ ಭಾಗ್ಯಾ, ವಾಣಿ, ಜ್ಯೋತಿ, ರೇಖಾ, ವಿಜಯಾ, ರೋಹಿಣಿ ಇತರರಿದ್ದರು.

Share This Article

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…

ಕೂದಲು ಉದುರುವ ಸಮಸ್ಯೆ ಪರಿಹಾರಕ್ಕೆ ರಾಮಬಾಣ ಹರಳೆಣ್ಣೆ ಹೇರ್​​ ವಾಶ್​​​; ನಿಮಗಾಗಿ ಹೆಲ್ತಿ ಮಾಹಿತಿ | Health Tips

ನಮ್ಮ ಕೂದಲನ್ನು ಸ್ವಚ್ಛವಾಗಿಡಲು ಮತ್ತು ಕೂದಲು ಉದುರುವುದನ್ನು ತಡೆಯಲು ಏನೆನೋ ಮಾಡುತ್ತೇವೆ. ನಮ್ಮ ಕೂದಲಿನ ಬೆಳವಣಿಗೆಯ…