ಮಕ್ಕಳ ಮೇಲಿನ ಶೋಷಣೆ ತಡೆಗೆ ಶ್ರಮಿಸಿ

blank

ಔರಾದ್: ಮಕ್ಕಳನ್ನು ಅಂಗಡಿಗಳಲ್ಲಿ ಕಡಿಮೆ ವೇತನದಲ್ಲಿ ದುಡಿಸಿಕೊಳ್ಳುತ್ತಾರೆ. ಅಂಥವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಜಿ ಹುಸೇನಸಾಬ್ ಯಾಡವಾಡ ಎಚ್ಚರಿಕೆ ನೀಡಿದರು.

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಶಿಕ್ಷಣ ಇಲಾಖೆ ಸಹಯೋಗದಡಿ ಗುರುವಾರ ಆಯೋಜಿಸಿದ್ದ ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತದೆ. ಸಮಾಜಕ್ಕೆ ಮಾರಕವಾಗಿರುವ ಬಾಲಕಾರ್ಮಿಕ ಪದ್ಥತಿಯ ಸಂಪೂರ್ಣ ನಿರ್ಮೂಲನೆಗೆ ಅಧಿಕಾರಿಗಳು ಶ್ರಮಿಸುವುದರ ಜತೆಗೆ ಜನಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಬಹುತೇಕ ಬಾಲ ಕಾರ್ಮಿಕರು ಕೃಷಿ ಕಾರ್ಯ, ವಿವಿಧ ಅಂಗಡಿ ಮುಂಗಟ್ಟುಗಳಲ್ಲಿ ಇರುತ್ತಾರೆ. ಶಿಕ್ಷಕರು ಮತ್ತು ನಾಗರಿಕರು ಎಲ್ಲೆ ಬಾಲಕಾರ್ಮಿಕರು ಕಂಡು ಬಂದಲ್ಲಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ಕರೆ ಮಾಡಿ ತಿಳಿಸಬೇಕು ಎಂದರು.

ಕಾರ್ಮಿಕ ಇಲಾಖೆಯ ಅಧಿಕಾರಿ ರಾಹುಲ ರತ್ನಾಕರ್ ಮಾತನಾಡಿದರು. ಬಾಲಾಜಿ ಕಂಬಾರ, ಶ್ರೀಧರ, ರಘುನ್ನಾಥ, ಸುನೀಲ, ಹಣಮಂತರಾವ ಮುಕ್ತೆದಾರ್, ಸುಭಾಷ ಸಾಕ್ರೆ ಇತರರಿದ್ದರು. ನ್ಯಾಯಾಲಯ ಆವರಣದಿಂದ ಕೇಂದ್ರ ಬಸ್ ನಿಲ್ದಾಣದವರೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿ ಜಾಥಾ ಕೈಗೊಳ್ಳಲಾಯಿತು. ಪಟ್ಟಣದ ಶಾಲಾ ಕಾಲೇಜುಗಳ ಮಕ್ಕಳು ಭಾಗವಹಿಸಿ ದುಡಿಮೆ ಬೇಡ ಶಿಕ್ಷಣ ಬೇಕು, ಮಕ್ಕಳನ್ನು ದುಡಿಸದಿರಿ, ಶಾಲೆಗೆ ಕಳುಹಿಸಿ ಅನ್ನುವ ಘೋಷಣೆಗೊಂದಿಗೆ ಜಾಗೃತಿ ಮೂಡಿಸಿದರು.

Share This Article

ಬೇಯಿಸಿದ ಮತ್ತು ಹಸಿ ಬೀಟ್ರೂಟ್: ಇವೆರಡರಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ಗೊತ್ತಾ? Beetroots

Beetroots: ಬೀಟ್‌ರೂಟ್‌ಗಳನ್ನು ಹಸಿಯಾಗಿ ಅಥವಾ ಕುದಿಸಿ ಸೇವಿಸುವ ಅತ್ಯುತ್ತಮ ಮಾರ್ಗವು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿಯಾಗಿದೆ.…

ನೀವು ರಾತ್ರಿಯಲ್ಲಿ ಪದೇ ಪದೇ ನೀರು ಕುಡಿಯುತ್ತಿದ್ದೀರಾ? ಇದು ಆರೋಗ್ಯ ಸಮಸ್ಯೆಯ ಲಕ್ಷಣಗಳಾಗಿವೆ.. ನಿರ್ಲಕ್ಷಿಸಬೇಡಿ Drinking Water

Drinking Water : ಮಾನವನ ಆರೋಗ್ಯಕ್ಕೆ ನೀರು ಅತ್ಯಗತ್ಯ. ಆದರೆ, ನಾವು ಅದನ್ನು ಯಾವಾಗ ಕುಡಿಯುತ್ತೇವೆ…