ಚಾಮರಾಜನಗರ: ಮತದಾನ ಜಾಗೃತಿ ಅಭಿಯಾನ ಮತ್ತು ಮಿಂಚಿನ ನೋಂದಣಿ ಹಿನ್ನಲೆ ನಗರದಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಜಾಥಾ ನಡೆಸಿದರು.
ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನ ಆವರಣದಲ್ಲಿ ಜಾಥಾಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಚಾಲನೆ ನೀಡಿದರು. ಪ್ರಜಾಪ್ರಭುತ್ವ ಗೆಲ್ಲಿಸಿ, ಮತದಾನ ಕಡ್ಡಾಯ, ನೈತಿಕ ಮತದಾನ ನಮ್ಮ ಬದ್ಧತೆ ಎಂಬಿತ್ಯಾದಿ ನಾಮಫಲಕ ಹಿಡಿದು ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನದವರೆಗೆ ಜಾಥಾ ನಡೆದರು.
ಜಿಪಂ ಸಿಇಒ ನಾರಾಯಣ ರಾವ್, ಡಿಡಿಪಿಐ ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.