ಮಳೆಗೆ ಮಹದೇಶ್ವರರ ಪ್ರತಿಮೆ ಬಳಿಯ ತಡೆಗೋಡೆ ಕುಸಿತ

blank


ಚಾಮರಾಜನಗರ : ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಿಸಿರುವ 108 ಅಡಿ ಎತ್ತರದ ಶ್ರೀ ಮಹದೇಶ್ವರರ ಪ್ರತಿಮೆ ಬಳಿಯ ತಡೆಗೋಡೆ ಮಳೆಗೆ ಕುಸಿದಿದೆ.


ಮ.ಬೆಟ್ಟವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಹಾಗೂ ಆಗಮಿಸುವ ಭಕ್ತರಿಗೆ ಶ್ರೀ ಮಹದೇಶ್ವರರ ಸಂಪೂರ್ಣ ಚಾರಿತ್ರ್ಯವನ್ನು ತಿಳಿಸುವ ಉದ್ದೇಶದಿಂದ 20 ಕೋಟಿ ರೂ. ವೆಚ್ಚದಲ್ಲಿ ದೀಪದಗಿರಿ ಒಡ್ಡುವಿನಲ್ಲಿ ಶ್ರೀ ಮಹದೇಶ್ವರರ ಪ್ರತಿಮೆಯನ್ನು ನಿರ್ಮಿಸಲಾಗಿದೆ.

ಗುಹೆಯಲ್ಲಿನ ಮೂರ್ತಿಗಳು, ಉದ್ಯಾನವನ, ರಸ್ತೆ, ವಿದ್ಯುತ್ ಸೇರಿದಂತೆ ಇನ್ನು ಅನೇಕ ಕಾಮಗಾರಿಗಳು ಬಾಕಿಯಿದ್ದರೂ ಮಾ.18 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿ ಭಕ್ತರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಮಾರ್ಗದ ರಸ್ತೆ ಕಾಮಗಾರಿಯನ್ನು ಆರಂಭಿಸುವ ಹಿನ್ನೆಲೆಯಲ್ಲಿ ಪ್ರಾಕಾರದ ಆಡಳಿತ ಭಕ್ತರಿಗೆ ಪ್ರವೇಶವನ್ನು ನಿರ್ಬಂಸಲಾಗಿತ್ತು. ಈ ಬಗ್ಗೆ ಭಕ್ತರು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.


ಇದೀಗ ಆಗಾಗ್ಗೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರತಿಮೆಯ ಸಮೀಪದಲ್ಲಿನ ತಡೆಗೋಡೆ ಕುಸಿದಿದ್ದು, ಕಲ್ಲುಗಳು ಕಿತ್ತು ಬಂದಿವೆ. ಸತತ ಮಳೆಯಾದರೆ ತಡೆಗೋಡೆ ಸಂಪೂರ್ಣ ಕುಸಿಯುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಭಕ್ತರು ತೀವ್ರ ಆಕ್ಷೇಪವ್ಯಕ್ತಪಡಿಸಿದ್ದು, ಪ್ರಾಕಾರದ ಆಡಳಿತ ಇತ್ತ ಗಮನಹರಿಸಿ ತಡೆಗೋಡೆಯನ್ನು ರಿಪೇರಿ ಮಾಡಿಸುವುದರ ಜತೆಗೆ ಬಾಕಿಯಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಭಕ್ತರ ವೀಕ್ಷಣೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿದ್ದಾರೆ.
ೆಟೋ

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…