ಮಾನವಜನ್ಮ ಸಾರ್ಥಕ ಮಾಡಿಕೊಳ್ಳಬೇಕು

blank

ಐನಾಪುರ: ಮನುಷ್ಯ ಜನ್ಮ ಅತಿ ಶ್ರೇಷ್ಠವಾಗಿದ್ದು, ಸಾರ್ಥಕಪಡಿಸಿಕೊಳ್ಳಬೇಕು ಎಂದು ಸ್ಥಳೀಯ ಗುರುದೇವ ಆಶ್ರಮದ ಬಸವೇಶ್ವರ ಸ್ವಾಮೀಜಿ ಹೇಳಿದರು.

ತಾಲೂಕಿನ ಐನಾಪುರ ಪಟ್ಟಣದ ಶ್ರೀ ವಿಶ್ವನಾಥ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ಜನಜಾಗೃತಿ ವೇದಿಕೆ ಅಥಣಿ, ಚಿಕ್ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ಆರಕ್ಷಕ ಠಾಣೆ, ಪ್ರಗತಿ ಬಂಧು ಸ್ವಸಹಾಯ ಸಂಘ ಐನಾಪುರ ವಲಯ, ತಾಲೂಕು ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ 1767ನೇ ಮದ್ಯವರ್ಜನ ಶಿಬಿರ ಸಮಾರೋಪದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಯೋಜನಾಧಿಕಾರಿ ಭಾಸ್ಕರ್ ಎನ್., ಜಿಲ್ಲಾ ಜನ ಜಾಗೃತಿ ಅಥಣಿ ಚಿಕ್ಕೋಡಿ ಅಧ್ಯಕ್ಷ ಸಂಜಯ ನಾಡಗೌಡ, ಜಿಪಂ ಮಾಜಿ ಸದಸ್ಯೆ ಪ್ರೇಮಲತಾ ರೆಡ್ಡಿ, ನಾಗರತ್ನಮ್ಮ ಹೆಗಡೆ, ಕಾವೇರಿ ಅಮ್ಮನವರು, ಅಮರ್ ದುರ್ಗನವರ್, ಪ್ರಕಾಶ ಕೋರ್ಬು, ವಿರೂಪಾಕ್ಷಿ ಡೂಗನವರ, ಎ.ಬಿ. ಪಾಟೀಲ, ವೀರಭದ್ರ ಕಟಗೇರಿ ಮಾತನಾಡಿದರು. ಮದ್ಯವರ್ಜನ ಶಿಬಿರದಲ್ಲಿ 56 ಜನ ಪಾಲ್ಗೊಂಡಿದ್ದರು. ಶಿವಾನಂದ ಹೊಸಮನಿ, ವಿಠ್ಠಲ ಹಳ್ಳೊಳ್ಳಿ, ಅನಿಲ ತಳವಾರ, ಸಿದ್ದು ಪೌಲಿ, ಯೋಜನಾಧಿಕಾರಿ ಸಂಜೀವ ಮರಾಠೆ, ನಾರಾಯಣ ಎಂ., ಮೇಲ್ವಿಚಾರಕಿ ಸವಿತಾ ದೇಸಾಯಿ ಇತರರಿದ್ದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…