ಮುಂದಿನ ಪೀಳಿಗೆಗೆ ಸಂಸ್ಕೃತಿ ಹಸ್ತಾಂತರಿಸಿ

blank

ಅರಕಲಗೂಡು ಕ್ಷೇತ್ರದ ಶಾಸಕ ಎ.ಮಂಜು ಸಲಹೆ

ಸೋಮವಾರಪೇಟೆ: ಸೋಮವಾರಪೇಟೆ ಅರೆಭಾಷೆ ಗೌಡ ಸಮಾಜದ ವಾರ್ಷಿಕ ಸಂತೋಷ ಕೂಟ ಕಾರ್ಯಕ್ರಮ ಸ್ಥಳೀಯ ಸಾಂದೀಪನಿ ಶಾಲಾ ಆವರಣದಲ್ಲಿ ಬುಧವಾರ ನಡೆಯಿತು.
ಕಾರ್ಯಕ್ರಮವನ್ನು ಅರಕಲಗೂಡು ಕ್ಷೇತ್ರದ ಶಾಸಕ ಎ.ಮಂಜು ಉದ್ಘಾಟಿಸಿದರು. ಜೀವನದಲ್ಲಿ ಒಳ್ಳೆಯ ಬದಲಾವಣೆ ವಿದ್ಯೆಯಿಂದ ಮಾತ್ರ ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು. ಮಕ್ಕಳಿಗೆ ಸಂಸ್ಕೃತಿಯನ್ನು ಕಲಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಅರೆಭಾಷೆ ಗೌಡ ಸಮಾಜದ ಅಭಿವೃದ್ಧಿ, ಕಾರ್ಯ ಚಟುವಟಿಕೆಗಳಿಗೆ ಎಲ್ಲ ರೀತಿಯ ಸಹಕಾರವನ್ನೂ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಂಘದ ಅಧ್ಯಕ್ಷ ದಂಡಿನ ಉತ್ತಯ್ಯ ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಸಾಂದೀಪನಿ ಶಾಲೆಯ ಮುಖ್ಯಸ್ಥ ಮೂಡಗದ್ದೆ ಲಿಖಿತ್ ದಾಮೋದರ್, ಉಪಾಧ್ಯಕ್ಷ ಮುಕ್ಕಾಟಿ ಚಂಗಪ್ಪ, ಖಜಾಂಚಿ ಕುದುಕುಳಿ ಗಜೇಂದ್ರ ಇದ್ದರು. ಸಮಾಜದವರಿಗೆ ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ತರಗತಿಯಲ್ಲಿ ಶೇ.95ಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…