ಸೋಮವಾರಪೇಟೆ: ಅರಣ್ಯ ಇಲಾಖೆಯ ವತಿಯಿಂದ ಯಡವನಾಡು ಮೀಸಲು ಅರಣ್ಯ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಬುಧವಾರ ನಡೆಯಿತು.
ಯಡನವನಾಡು ಗ್ರಾಮದಿಂದ ಬೇಳೂರುಬಾಣೆಯ ತನಕ ರಸ್ತೆಯ ಇಕ್ಕೆಲಗಳಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ಮತ್ತು ಬಾಟಲ್ಗಳನ್ನು ಸಿಬ್ಬಂದಿ ಸ್ವಚ್ಛಗೊಳಿಸಿದರು. ಆರ್ಎಫ್ಒ ಶೈಲೇಂದ್ರ ಮಾತನಾಡಿ, ಬೇಳೂರು ಗ್ರಾಮದಿಂದ ಯಡವನಾಡು ತನಕ ರಸ್ತೆಯ ಬದಿಯಲ್ಲಿ ಮೀಸಲು ಅರಣ್ಯವಿದ್ದು, 4 ಕಿ.ಮೀ. ತನಕ ಯಾವುದೇ ಕಟ್ಟಡ ಇಲ್ಲ. ವನ್ಯಪ್ರಾಣಿಗಳು ಸಂಚರಿಸುವ ಸ್ಥಳವಾಗಿರುವುದರಿಂದ ವಾಹನಗಳನ್ನು ನಿಲ್ಲಿಸುವುದನ್ನು ನಿಷೇಧಿಸಲಾಗಿದೆ. ಆದರೂ ಕೆಲ ಪ್ರವಾಸಿಗರು ವಾಹನಗಳನ್ನು ನಿಲ್ಲಿಸುತ್ತಾರೆ. ಪ್ಲಾಸ್ಟಿಕ್ ಮತ್ತು ಬಾಟಲ್ ಎಸೆಯುತ್ತಾರೆ. ಇವುಗಳನ್ನು ಪ್ರಾಣಿಗಳು ತಿಂದು ಅಸ್ವಸ್ಥಗೊಳುತ್ತಿವೆ. ಈ ಕಾರಣದಿಂದ ಸ್ವಚ್ಛತಾ ಕಾರ್ಯ ನಡೆದಿದೆ. ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.
ಯಡವನಾಡು ಮೀಸಲು ಅರಣ್ಯದಲ್ಲಿ ಶ್ರಮದಾನ
ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್ ವಿಧಾನ | Recipe
ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…
ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…
ಟೊಮೆಟೊ ಸೇವನೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips
ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್.…